ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ 
ಪ್ರಧಾನ ಸುದ್ದಿ

ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ರಾಜಸ್ಥಾನದ ಡುಂಗರಪುರ್ ರಾಜಮನೆತನದ ಮಗಳು ತ್ರಿಷಿಕಾ ಕುಮಾರಿ ಸಿಂಗ್ ಅವರನ್ನು ವರಿಸುವ ಮೂಲಕ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್...

ಬೆಂಗಳೂರು: ರಾಜಸ್ಥಾನದ ಡುಂಗರಪುರ್ ರಾಜಮನೆತನದ ಮಗಳು ತ್ರಿಷಿಕಾ ಕುಮಾರಿ ಸಿಂಗ್ ಅವರನ್ನು ವರಿಸುವ ಮೂಲಕ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ.

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿವಾಹದ ಮೂಲಕ ವರ್ಷಗಳ ಬಳಿಕ ಮೈಸೂರು ರಾಜಮನೆತನದಲ್ಲಿ ಮತ್ತೆ ಸಂತಸ ಮರುಕಳಿಸಿದೆ. ಕರ್ಕಾಟಕ ಲಗ್ನದಲ್ಲಿ ರಾಜವಂಶಸ್ಥ ಯದುವೀರ ಅವರು ಮತ್ತು ತ್ರಿಷಿಕಾ ಕುಮಾರಿ ಅವರನ್ನು ವರಿಸಿದ್ದಾರೆ. ರಾಜಮನೆತನದ ಈ ವಿವಾಹಕ್ಕೆ ರಾಜವಂಶಸ್ಥರ ಕುಟುಂಬಸ್ಥರು, ದೇಶ-ವಿದೇಶಗಳಿಂದ ಬಂದ ಅತಿಥಿಗಳು ಹಾಗೂ ಇನ್ನಿತರೆ ಆಹ್ವಾನಿತ ಗಣ್ಯರು ಸಾಕ್ಷಿಯಾದರು.

ರಾಜಮನೆತನದ ವಿಧಿವಿಧಾನದಂತೆಯೇ ಯದುವೀರ ಅವರ ವಿವಾಹ ಸಂಪೂರ್ಣಗೊಂಡಿದ್ದು, ಮಾಂಗಲ್ಯ ಧಾರಣೆ ನಂತರ ಆರುಂಧತಿ ನಕ್ಷತ್ರ ಧ್ರುವ ನಕ್ಷತ್ರ ದರ್ಶನ ಸಂಪ್ರದಾಯಗಳನ್ನು ಮುಂದಿವರೆಸಲಾಗುತ್ತಿದೆ. ಸಂಜೆ 7.30ರ ಸುಮಾರಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಯಧುವೀರ ಹಾಗೂ ತ್ರಿಷಿಕಾ ಅವರಿಗೆ ದರ್ಬಾರ್ ಸಂಭಾಂಗಣದಲ್ಲಿ ವಿಶೇಷವಾಗಿ ಅಲಂಕರಿಸಿರುವ ತೂಗುಯ್ಯಾಲೆಯಲ್ಲಿ ಕುಳ್ಳಿರಿಸಿ ಹೂವಿನ ಚೆಂಡಾಟವನ್ನು ಆಡಿಸಲಾಗುತ್ತದೆ. ಇದರಂತೆ ರಾಜಮನೆತನದ ಇನ್ನಿತರೆ ಸಂಪ್ರದಾಯಗಳನ್ನು ಮುಂದುವರೆಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಬಕ್ರೀದ್: ಗೋವಿಗೆ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನ ನೀಡಿ: ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ

SCROLL FOR NEXT