ಮೈಸೂರು ಅರಮನೆಯಲ್ಲಿಂದು ರಾಯಲ್ ವೆಡ್ಡಿಂಗ್ 
ಪ್ರಧಾನ ಸುದ್ದಿ

ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿಂದು ರಾಯಲ್ ವೆಡ್ಡಿಂಗ್

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ರಾಜಸ್ಥಾನದ ಡುಂಗರಪುರ್ ರಾಜಮನೆತನದ ತ್ರಿಷಿಕಾ ಕುಮಾರಿ ಸಿಂಗ್ ಕಲ್ಯಾಣೋತ್ಸವಕ್ಕೆ ಮೈಸೂರು ಅರಮನೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ...

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ರಾಜಸ್ಥಾನದ ಡುಂಗರಪುರ್ ರಾಜಮನೆತನದ ತ್ರಿಷಿಕಾ ಕುಮಾರಿ ಸಿಂಗ್ ಕಲ್ಯಾಣೋತ್ಸವಕ್ಕೆ ಮೈಸೂರು ಅರಮನೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಮೈಸೂರು ಅರಮನೆಯಲ್ಲಿ 36 ವರ್ಷಗಳ ಬಳಿಕ ನಡೆಯುತ್ತಿರುವ ರಾಜ ವಿವಾಹಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ ರಾಜವಂಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ಕುಮಾರಿ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ.

ರಾಜಮನೆತನದ ಈ ವಿವಾಹಕ್ಕೆ ಸಾಕ್ಷಿಯಾಗಲು ರಾಜವಂಶಸ್ಥರ ಕುಟುಂಬಸ್ಥರು, ದೇಶ-ವಿದೇಶಗಳ ಆಹ್ವಾನಿತ ಗಣ್ಯರು ಈಗಾಗಲೇ ಅರಮನೆ ನಗರಿಗೆ ಆಗಮಿಸಿದ್ದಾರೆ. ಸ್ವತಃ ಪ್ರಮೋದಾ ದೇವಿ ಅವರು ವಿನ್ಯಾಸಗೊಳಿಸಿದ 'ಅಂಗರಕ' ಧರಿಸಿ ಯದುವೀರ್ ಮದುವೆಯಲ್ಲಿ ಮಿಂಚಲಿದ್ದಾರೆ.

ವಿವಾಹ ಮಹೋತ್ಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದು, ಈಗಾಗಲೇ ಅರಮನೆ ಸುತ್ತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು, ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

SCROLL FOR NEXT