ಮಾಜಿ ಪ್ರಧಾನಿ ರಾಜೀವ್ ಗಾಂಧಿ 
ಪ್ರಧಾನ ಸುದ್ದಿ

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ತಮಿಳುನಾಡು ಸರ್ಕಾರ ಸಿದ್ಧತೆ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. 
ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡು ಮಾಡಲಾಗಿತ್ತು. ಕಳೆದ 24 ವರ್ಷಗಳಿಂದ ಏಳು ಅಪರಾಧಿಗಳು ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ಸಿಬಿಐ ಪ್ರಕರಣದ ತನಿಖೆಯನ್ನು ನಡೆಸಿರುವುದರಿಂದ ಸಿಆರ್ ಪಿ ಸಿ ಪ್ರಕಾರ ರಾಜ್ಯ ಸರ್ಕಾರ ತನ್ನ ನಿರ್ಧಾರದ ಬಗ್ಗೆ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದೆ. ಏಳು ಅಪರಾಧಿಗಳಿಂದ ಅರ್ಜಿ ಪಡೆದ ನಂತರ ತಮಿಳುನಾಡು ಸರ್ಕಾರ ಅವರನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದೆ. ಎಂದು ತಮಿಳುನಾಡು ಮುಖ್ಯಕಾರ್ಯದರ್ಶಿ ಕೇಂದ್ರ ಗೃಹ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ರಾಜೀವ್ ಗಾಂಧಿ ಹಂತರ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದ ನಂತರ, ಏಳು ಅಪರಾಧಿಗಳನ್ನು ಬಿಡುಗಡೆ ಮಾಡುವುದಾಗಿ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ 2014 ರ ಫೆ.19 ರಂದು ಘೋಷಿಸಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ರಾಜೀವ್ ಗಾಂಧಿ ಹತ್ಯೆ ಪ್ರಕರಣವನ್ನು ತನಿಖೆ ನಡೆಸಿರುವ ಸಿಬಿಐ ಕೇಂದ್ರಿಯ ತನಿಖಾ ಸಂಸ್ಥೆಯಾಗಿರುವುದರಿಂದ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಸೂಚಿಸಿತ್ತು.    
ತಮಿಳುನಾಡು ಸರ್ಕಾರದ ನಿರ್ಧಾರದ ಬಗ್ಗೆ ಕೇಂದ್ರ ಸರ್ಕಾರ ಮೂರು ದಿನಗಳಲ್ಲಿ ಅಭಿಪ್ರಾಯ ತಿಳಿಸಲು ವಿಫಲವಾದರೆ ಸಿ ಆರ್ ಪಿ ಸಿ ಸೆಕ್ಷನ್ 432 ರ ಪ್ರಕಾರ ತಮಿಳುನಾಡು ಸರ್ಕಾರ ತನ್ನ ನಿರ್ಧಾರದೊಂದಿಗೆ  ಮುಂದುವರೆಯಬಹುದಾಗಿದೆ  ಎಂದು ಮುಖ್ಯಮಂತ್ರಿ  ಜಯಲಲಿತಾ ತಿಳಿಸಿದ್ದರು.  ಅಂದಿನ ಯುಪಿಎ ಸರ್ಕಾರ ತಮಿಳುನಾಡು ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರ ಪರಿಣಾಮ ಹಂತಕರ ಬಿಡುಗಡೆ ವಿಚಾರ ಮುಂದೂಡಲ್ಪಟ್ಟಿತ್ತು.  ಈಗ ಮತ್ತೆ ತಮಿಳುನಾಡು ಸರ್ಕಾರ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT