ನಜೀಮ್ ಜೈದಿ 
ಪ್ರಧಾನ ಸುದ್ದಿ

ಕೇರಳ, ತಮಿಳುನಾಡು ಸೇರಿ ಐದು ರಾಜ್ಯಗಳ ವಿಧಾಸಭೆ ಚುನಾವಣೆ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯಗಳ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾಸಭೆ ಚುನಾವಣೆಯ...

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯಗಳ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾಸಭೆ ಚುನಾವಣೆಯ ದಿನಾಂಕವನ್ನು ಶುಕ್ರವಾರ ಪ್ರಕಟಿಸಿದ್ದು, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಜೀಮ್ ಜೈದಿ ಅವರು ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೈದಿ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ವಿಧಾಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದರು.
ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾಸಭೆಗೆ ಮೇ 16ರಂದು ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 19ರಂದು ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯುಕ್ತರು ತಿಳಿಸಿದರು.
ಇದೇ ಮೊದಲ ಬಾರಿ ನೋಟಾಗೆ ಪ್ರತ್ಯೇಕ ಚಿಹ್ನೆ ನೀಡಲಾಗಿದ್ದು, ಎಲ್ಲ 5 ರಾಜ್ಯಗಳಲ್ಲೂ ಮತಕೇಂದ್ರಗಳ ಸಂಖ್ಯೆಯನ್ನು ಹೆಚ್ಚಳ ಮಾಡುವುದಾಗಿ ಜೈದಿ ತಿಳಿಸಿದರು.
ಅಸ್ಸಾಂನಲ್ಲಿ ಎರಡು ಹಂತದ ಚುನಾವಣೆ
ಅಸ್ಸಾಂ ವಿಧಾಸಭೆಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 4ರಂದು ಮೊದಲ ಹಂತದಲ್ಲಿ 65 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇನ್ನೂ ಏಪ್ರಿಲ್ 11ರಂದು ಎರಡನೇ ಹಂತದಲ್ಲಿ 61 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಪಶ್ಚಿಮ ಬಂಗಾಳದಲ್ಲಿ 6 ಹಂತದ ಚುನಾವಣೆ
ಪಶ್ಚಿಮ ಬಂಗಾಳದಲ್ಲಿ ಒಟ್ಟು 6 ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 4 ಮತ್ತು 11ರಂದು ಮೊದಲನೇ ಹಂತ, ಏಪ್ರಿಲ್ 17ರಂದು 2ನೇ ಹಂತ, ಏಪ್ರಿಲ್ 21ರಂದು 3ನೇ ಹಂತ, ಏಪ್ರಿಲ್ 25ರಂದು ನಾಲ್ಕನೆ ಹಂತ, ಏಪ್ರಿಲ್ 30ರಂದು 5ನೇ ಹಂತ ಹಾಗೂ ಮೇ 5ರಂದು 6ನೇ ಹಂತದ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT