ಅಪಘಾತದಲ್ಲಿ ಸಾವನ್ನಪ್ಪಿದ್ದ ಹರೀಶ್ 
ಪ್ರಧಾನ ಸುದ್ದಿ

ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಹರೀಶ್ ಹೆಸರಿಡಲು ಸರ್ಕಾರ ನಿರ್ಧಾರ

ನಗರದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿ, ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ನೆನೆಪಿಗಾಗಿ ಸರ್ಕಾರ ಇದೀಗ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದ್ದು...

ಬೆಂಗಳೂರು: ನಗರದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿ, ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ನೆನೆಪಿಗಾಗಿ ಸರ್ಕಾರ ಇದೀಗ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದ್ದು, ಯೋಜನೆಗೆ ಹರೀಶ್ ಹೆಸರಿಡುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಶನಿವಾರ ಹೇಳಿದ್ದಾರೆ.

ಈ ಕುರಿತಂತೆ ವಿಕಾಸಸೌಧದಲ್ಲಿ ಮಾತನಾಡಿರುವ ಯು.ಟಿ. ಖಾದರ್ ಅವರು, ಅಪಘಾತದಲ್ಲಿ ಗಾಯಗೊಳ್ಳುವವರಿಗೆ ಕ್ಷಿಪ್ರ ವೈದ್ಯಕೀಯ ನೆರವು ಸಿಗುವ ಉದ್ದೇಶದಿಂದ 'ಮುಖ್ಯಮಂತ್ರಿ ಸಾಂತ್ವನ' ಯೋಜನೆ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಹರೀಶ್ ಹೆಸರಿಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಅಪಘಾತಕ್ಕೀಡಾದ ವ್ಯಕ್ತಿಗೆ 48 ಗಂಟೆ ಅವಧಿಗೆ ಗರಿಷ್ಠ ರು. 25 ಸಾವಿರ ವರೆಗಿನ ಚಿಕಿತ್ಸೆಯನ್ನು ಮಾನವೀಯ ನೆಲೆಯಲ್ಲಿ ಒದಗಿಸುವ ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ರು. 72 ಕೋಟಿ ಗಳಿಗೆ ಸಂಚಿವ ಸಂಪುಟ ಒಪ್ಪಿಗೆ ನೀಡಿದೆ. ಇದೀಗ ಯೋಜನೆಗೆ ರು.10 ಕೋಟಿ ಈಗಾಗಲೇ ಬಿಡುಗಡೆಯಾಗಿದ್ದು. ಯೋಜನೆಗೆ ಮೂರು ಹಂತದಲ್ಲಿ ಆಸ್ಪತ್ರೆಗಳ ನೋಂದಣಿಯನ್ನು ಮಾಡಿಕೊಳ್ಳಲಾಗುತ್ತದೆ. ಹರೀಶ್ ದಿಟ್ಟತನಕ್ಕೆ ಆರೋಗ್ಯ ಇಲಾಖೆ ಈ ಮೂಲಕ ಕೊಡುಗೆಯನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ಫೆ.16 ರಂದು ನೆಲಮಂಗಲದ ಬೇಗೂರ್ ಗೇಟ್ ಬಳಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿತ್ತು. ಅಪಘಾತದಲ್ಲಿ ಬೈಕ್ ಸವಾರ ಹರೀಶ್ ಎಂಬ ಯುವಕನ ದೇಹ ಎರಡು ಭಾಗವಾಗಿ ರಸ್ತೆಯಲ್ಲಿ ಬಿದ್ದಿತ್ತು. ದೇಹ ಎರಡು ತುಂಡಾದರೂ ಎರಡೂ ಕೈಯನ್ನು ಬಡಿಯುತ್ತ ಜೀವ ಉಳಿಸಿ ಎಂದು ಕೂಗಿಕೊಂಡು ತನ್ನ ಅಂಗಾಂಗ ದಾನ ಮಾಡಲು ಸಹಾಯ ಮಾಡುವಂತೆ ಅಂಗಾಲಾಚುತ್ತಿರು ಹೃದಯವಿದ್ರಾವಕ ಘಟನೆ ನಡೆದಿತ್ತು. ಯುವಕನ ಕೊನೆಯಾಸೆಯಂತೆಯೇ ಆತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನ್ನಲ್ಲೂ ಸಾರ್ಥಕತೆಯನ್ನು ಮೆರೆದಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT