ಗುಜರಾತ್ ಮೇಲೆ ಉಗ್ರ ದಾಳಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಗುಜರಾತ್ ಮೇಲೆ ದಾಳಿಗೆ ಭಾರತಕ್ಕೆ ನುಗ್ಗಿದ 10 ಉಗ್ರರು; ಎನ್ ಎಸ್ ಜಿ ಯೋಧರ ತುರ್ತು ರವಾನೆ

ಪಾಕಿಸ್ತಾನ ಮೂಲದ 10 ಮಂದಿ ಉಗ್ರರು ಭಾರತಕ್ಕೆ ನುಸುಳಿದ್ದು, ಗುಜರಾತ್ ರಾಜ್ಯದ ಮೇಲೆ ಸಂಚು ರೂಪಿಸಿದ್ದಾರೆ ಎಂದು ಪಾಕಿಸ್ತಾನದ ರಾಷ್ಟ್ರೀಯ ತನಿಖಾ ದಳ ಎನ್ ಎಸ್ ಎ ಮಹತ್ವದ ಮಾಹಿತಿ ನೀಡಿದೆ...

ನವದೆಹಲಿ: ಪಾಕಿಸ್ತಾನ ಮೂಲದ 10 ಮಂದಿ ಉಗ್ರರು ಭಾರತಕ್ಕೆ ನುಸುಳಿದ್ದು, ಗುಜರಾತ್ ರಾಜ್ಯದ ಮೇಲೆ ಸಂಚು ರೂಪಿಸಿದ್ದಾರೆ ಎಂದು ಪಾಕಿಸ್ತಾನದ ರಾಷ್ಟ್ರೀಯ ತನಿಖಾ ದಳ ಎನ್ ಎಸ್ ಎ ಮಹತ್ವದ ಮಾಹಿತಿ ನೀಡಿದೆ.

ನಾಳೆ ಶಿವರಾತ್ರಿ ಇದ್ದು, ಇದೇ ಸಂದರ್ಭದಲ್ಲಿ ಗುಜರಾತ್ ಹಲವೆಡೆ ವಿಧ್ವಂಸಕ ಕೃತ್ಯಗಳನ್ನು ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ  (ಎನ್ ಎಸ್ ಎ) ನಾಸಿರ್ ಖಾನ್ ಜಂಜುವಾ ಅವರು ಭಾರತದ ಭದ್ರತಾ ಸಲಹೆಗಾ ಅಜಿತ್ ಧೋವಲ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಉಗ್ರ ದಾಳಿ ಕುರಿತು ಪಾಕಿಸ್ತಾನ ಎನ್ ಎಸ್ ಎ ಇದೇ ಮೊದಲ ಬಾರಿಗೆ ಭಾರತೀಯ ಭದ್ರತಾ ಸಂಸ್ಥೆಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಗುಜರಾತ್ ಗೆ ಎನ್ ಎಸ್ ಜಿ ಕಮಾಂಡೋ ಪಡೆಗಳನ್ನು ತುರ್ತು ರವಾನೆ ಮಾಡಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಗುಜರಾತ್ ನಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಸ್ಥಳೀಯ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ರಾತ್ರಿಯಿಂದಲೇ ಗುಜರಾತ್ ರಾಜ್ಯದ ಗಡಿ ಪ್ರದೇಶಗಳಿಗೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತೀವ್ರ ತಪಾಸಣೆಗೊಳಪಡಿಸಲಾಗುತ್ತಿದೆ. ಪ್ರಮುಖವಾಗಿ ಸಮುದ್ರ ಗಡಿಯಲ್ಲಿ ಮತ್ತು ಬಂದರುಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ದೇವಾಲಯಗಳೇ ಉಗ್ರರ ಟಾರ್ಗೆಟ್
ಇದೇ ವೇಳೆ ಪಾಕಿಸ್ತಾನದಿಂದ ಭಾರತದೊಳಗೆ ನುಸುಳಿರುವ ಭಯೋತ್ಪಾದಕರು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ದೇವಾಲಯಗಳೇ ಉಗ್ರ ಪ್ರಮುಖ ಟಾರ್ಗೆಟ್ ಎಂದು ಹೇಳಲಾಗುತ್ತಿದೆ. ನಾಳೆ ಮಹಾಶಿವರಾತ್ರಿ ಇದ್ದು, ಗುಜರಾತ್ ಪ್ರಮುಖ ದೇವಾಲಯಗಳು ಜನಜಂಗುಳಿಯಿಂದ ತುಂಬಿರುತ್ತದೆ. ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುವ ಹುನ್ನಾರದಲ್ಲಿರುವ ಉಗ್ರರು ಅಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆಯಷ್ಟೇ ಕಚ್ ನಲ್ಲಿ ಶಂಕಿತ ಬೋಟ್ ವೊಂದು ಪತ್ತೆಯಾಗಿದ್ದು, ಪಾಕಿಸ್ತಾನ ಎನ್ ಎಸ್ ಎ ಎಚ್ಚರಿಕೆಗೆ ಪುಷ್ಟಿ ನೀಡುವಂತಾಗಿದೆ. ಒಟ್ಟಾರೆ ಇದೀಗ ಗುಜರಾತ್ ನಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಇತರೆ ರಾಜ್ಯಗಳಿಗೆ ಎಚ್ಚರಿಕೆ ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT