ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ: ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ: ಸಿದ್ದರಾಮಯ್ಯ

ರು. 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಕಾಮಗಾರಿ ಆರಂಭವಾಗಿದ್ದು, ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...

ಬೆಂಗಳೂರು: ರು. 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಕಾಮಗಾರಿ ಆರಂಭವಾಗಿದ್ದು, ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಎತ್ತಿನಹೊಳೆ ಯೋಜನೆ ಸಂಬಂಧ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಸಿದ್ದರಾಮಯ್ಯ ಅವರು ಎತ್ತಿನ ಹೊಳೆ ಯೋಜನೆಗೆ ಈಗಾಗಲೇ ರು. 1800 ಕೋಟಿ ರುಪಾಯಿ ಹಣ ಖರ್ಚಾಗಿದೆ. ರು. 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಕಾಮಗಾರಿ ಆರಂಭವಾಗಿದ್ದು, ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ರೈತರ ಕುರಿತಂತೆ ಮಾತನಾಡಿದ ಅವರು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ, ರೈತರ ಸಮಸ್ಯೆಗಳನ್ನು ಎಂದಿಗೂ ನಿರ್ಲಕ್ಷಿಸಿಲ್ಲ. ರೈತರ ಹೋರಾಟ ಹತ್ತಿಕ್ಕುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ. ನಾನು ಕೂಡ ರೈತ ಕುಟುಂಬದಿಂದಲೇ ಬಂದವನು. ಹೀಗಾಗಿ ರೈತರ ಮೇಲೆ ಯಾವುದೇ ರೀತಿಯಲ್ಲಿ ಬಲ ಪ್ರಯೋಗಿಸುವುದಿಲ್ಲ. ಕನಸಿನಲ್ಲೂ ಬಲ ಪ್ರಯೋಗದ ಬಗ್ಗೆ ಯೋಚಿಸುವುದಿಲ್ಲ ಎಂದು ರೈತ ಮುಖಂಡರಿಗೆ ಹೇಳಿದ್ದಾರೆ.

ಸಭೆ ವೇಳೆ ಪ್ರವೇಶ ನೀಡದ ಪೊಲೀಸರ ವಿರುದ್ಧ ರೈತರ ಆಕ್ರೋಶ
ಒಂದೆಡೆ ಎತ್ತಿನಹೊಳೆ ಯೋಜನೆ ಸಂಬಂಧ ಅಧಿಕಾರಿಗಳು ರೈತ ಮುಖಂಡರ ಜೊತೆ ಮಾತುಕತೆ ನಡೆಸುತ್ತಿದ್ದರೆ, ಮತ್ತೊಂದೆಡೆ ರೈತರು ಪೊಲೀಸರು ಹಾಗೂ ಸರ್ಕಾರದ ವಿರುದ್ಧ
ಧಿಕ್ಕಾರದ ಕೂಗು ಕೂಗುತ್ತಿರುವ ಧ್ವನಿ ಕೇಳಿಬರುತ್ತಿತ್ತು.

ಇದಕ್ಕೆ ಕಾರಣ ರೈತರಿಗೆ ಸಭೆಯಲ್ಲಿ ಪ್ರವೇಶ ನೀಡದಿರುವುದು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಗೆ ಪ್ರವೇಶ ನೀಡದಿದ್ದಕ್ಕೆ ಪೊಲೀಸರ ವಿರುದ್ಧ ರೈತರು ಹರಿಹಾಯ್ದಿದ್ದಾರೆ. ಅಲ್ಲದೆ ಸರ್ಕಾರ ವಿರುದ್ಧ ಧಿಕ್ಕಾರವನ್ನು ಕೂಗಿದ್ದಾರೆ.

ಯೋಜನೆ ಕುರಿತಂತೆ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ, ಕೋಲಾರದಿಂದ ಹಲವಾರು ರೈತರು ಹಾಗೂ ಜನಪ್ರತಿನಿಧಿಗಳು ಬಂದಿದ್ದರು. ಆದರೆ, ಸಭೆಗೆ ರೈತ ಮುಖಂಡರಿಗೆ ಮಾತ್ರ ಪ್ರವೇಶ ನೀಡಿದ ಪೊಲೀಸರು ಉಳಿದ ರೈತರು ಒಳಪ್ರವೇಶಿಸುವುದನ್ನು ನಿರಾಕರಿಸಿದ್ದರು. ಅಲ್ಲದೆ, ಗೃಹ ಕಚೇರಿ ಎದುರು ನಿಲ್ಲಲು ಬಿಡದೆ ಕುಮಾರ ಕೃಪಾ ಕಡೆಗೆ ರೈತರನ್ನು ಕಳುಹಿಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ನಿವಾಸದೆದರು ರೈತರು ಗುಂಪು ಗುಂಪಾಗಿ ನಿಂತ ಹಿನ್ನೆಲೆಯಲ್ಲಿ ಎಲ್ಲಿ ಪ್ರತಿಭಟನೆ ನಡೆಸುತ್ತಾರೋ ಎಂಬ ಕಾರಣಕ್ಕೆ ಪೊಲೀಸರು ಗುಂಪು ಚದುರಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಅಕ್ರೋಶಗೊಡ ರೈತರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಈ ವೇಳೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಸೀರ್ ಅಹ್ಮದ್ ಅವರು ನಾನು ಯಾರು ಗೊತ್ತಾ ಎಂದು ಪೊಲೀಸರಿಗೆ ಪ್ರಶ್ನಿಸಿದ್ದಾರೆ. ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ನಡೆದ ಕೆಲವು ನಿಮಿಷಗಳ ಬಳಿಕ ಪೊಲೀಸರು ರೈತರನ್ನು ಒಳ ಹೋಗಲು ಬಿಟ್ಟಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT