ಆರ್ಟ್ ಆಫ್ ಲಿವಿಂಗ್ ನ ಯೋಗ ಗುರು ರವಿಶಂಕರ್ 
ಪ್ರಧಾನ ಸುದ್ದಿ

ಸಾರ್ವಜನಿಕ ಸುರಕ್ಷತೆಗಾಗಿ 'ಆರ್ಟ್ ಆಫ್ ಲಿವಿಂಗ್' ಕಾರ್ಯಕ್ರಮಕ್ಕೆ ಸೇನಾ ಸಹಾಯ

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಘದವರು ಯಮುನಾ ನದಿಯ ದಂಡೆಯಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ ನಡೆಸಲು ಮುಂದಾಗಿದ್ದು, ಅಲ್ಲಿ ೩೦ ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದು,

ನವದೆಹಲಿ: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಘದವರು ಯಮುನಾ ನದಿಯ ದಂಡೆಯಲ್ಲಿ ವಿಶ್ವ ಸಾಂಸ್ಕೃತಿಕ ಉತ್ಸವ ನಡೆಸಲು ಮುಂದಾಗಿದ್ದು, ಅಲ್ಲಿ ೩೦ ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದ್ದು, ಕಾಲ್ತುಳಿತದ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸರು ಆತಂಕ ವ್ಯಕ್ತಪಡಿಸಿದ್ದರಿಂದ ಭಾರತೀಯ ಸೇನೆ ಅಲ್ಲಿ ಆಣೆಕಟ್ಟು ಕಟ್ಟಲು ಮುಂದಾಯಿತು ಎಂದು ಭದ್ರತಾ ಸಚಿವ ಮಹೋಹರ್ ಪರ್ರಿಕರ್ ಅವರ ಆಪ್ತ ಮೂಲಗಳು ತಿಳಿಸಿವೆ.

ಇದಕ್ಕಾಗಿ ಆರ್ಟ್ ಆಫ್ ಲಿವಿಂಗ್ ನವರಿಗೆ ಯಾವುದೇ ಶುಲ್ಕ ಹಾಕುವುದಿಲ್ಲ ಏಕೆಂದರೆ ಅದಕ್ಕೆ ತಕ್ಕನಾದ ನೀತಿಯಿಲ್ಲ ಎಂದು ಮೂಲಗಳು ತಿಳಿಸಿವೆ.

ಇನ್ನು ಮುಂದೆ ಇಂತಹ ಕಾರ್ಯಕ್ರಮಗಳಲ್ಲಿ ಸೇನೆ ಭಾಗಿಯಾಗಲು ಹೊಸ ನೀತಿ ರೂಪಿಸಲು ರಕ್ಷಣಾ ಕಾರ್ಯದರ್ಶಿಯವರಿಗೆ ರಕ್ಷಣಾ ಸಚಿವರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕಾರ್ಯಕ್ರಮ ಜರುಗುವ ಸ್ಥಳದಲ್ಲಿ ಯಮುನಾ ನದಿಗೆ ಆರು ಸ್ಥಳಗಳಲ್ಲಿ ಆಣೆಕಟ್ಟು ಕಟ್ಟಲು ಆರ್ಟ್ ಆಫ್ ಲಿವಿಂಗ್ ಸೇನೆಯನ್ನು ಮನವಿ ಮಾಡಿತ್ತಾದರೂ ಮೊದಲಿಗೆ ಸೇನೆ ನಿರಾಕರಿಸಿತ್ತು ಎಂದು ತಿಳಿದಿದೆ. ಆದರೆ ದೆಹಲಿ ಪೊಲೀಸರು ಕಾಲ್ತುಳಿತದ ಕಳವಳ ವ್ಯಕ್ತಪಡಿಸಿದಾಗ ರಕ್ಷಣಾ ಸಚಿವಾಲಯ ಸಹಾಯಕ್ಕೆ ಒಪ್ಪಿಕೊಂಡಿದೆ. "ಈ ನಿಟ್ಟಿನಲ್ಲಿ ಸಚಿವಾಲಯ ಆಣೆಕಟ್ಟು ಕಟ್ಟಲು ಸೇನೆಗೆ ಮನವಿ ಮಾಡಿಕೊಂಡಿದೆ" ಎಂದು ಮೂಲಗಳು ತಿಳಿಸಿವೆ.

ಆರ್ಟ್ ಆಫ್ ಲಿವಿಂಗ್ ನ ಯೋಗ ಗುರು ರವಿಶಂಕರ್ ಈ ಕಾರ್ಯಕ್ರಮ ಆಯೋಜಿಸಿದ್ದು ಮಾರ್ಚ್ ೧೧ ರಿಂದ ೧೩ ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಆಯೋಜನೆಯಿಂದಾಗಿ ಯಮುನಾ ದಂಡೆಯಲ್ಲಿ ಪರಿಸರ ಹಾಳಾಗಿದೆ ಎಂದು ಹಲವಾರು ಪರಿಸರವಾದಿಗಳು ದೂರಿದ್ದರು. ಅಲಲ್ದೆ ಈ ಕೆಲಸಕ್ಕಾಗಿ ಸೇನಾ ನೆರವನ್ನು ತೆಗೆದುಕೊಂಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!