ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಸಿ ಬಿ ಐನಿಂದ ಕೇಜ್ರಿವಾಲ್ ಪ್ರಧಾನ ಕಾರ್ಯದರ್ಶಿಯವರ ಸಿಬ್ಬಂದಿಗಳ ವಿಚಾರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಸಿಬ್ಬಂದಿಗಳನ್ನು ಸಿಬಿಐ ಮಂಗಳವಾರ ವಿಚಾರಣೆಗೆ ಒಳಪಡಿಸಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಸಿಬ್ಬಂದಿಗಳನ್ನು ಸಿಬಿಐ ಮಂಗಳವಾರ ವಿಚಾರಣೆಗೆ ಒಳಪಡಿಸಿದೆ. ಇದು ರಾಜೇಂದ್ರ ಕುಮಾರ್ ಅವರ ವಿರುದ್ಧ ಆರೋಪಿಸಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿರುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ರಾಜೇಂದ್ರ ಕುಮಾರ್ ಅವರ ೨-೩ ಸಿಬ್ಬಂದಿಗಳನ್ನು ವಿಚಾರಣೆಗೆ ಕರೆಸಲಾಗಿತ್ತು" ಎಂದು ಹೆಸರು ಹೇಳಲು ಇಚ್ಛಿಸಿದ ಸಿಬಿಐ ಅಧಿಕಾರಿ ಹೇಳಿದ್ದಾರೆ.

ಕುಮಾರ್ ಅವರ ಕಚೇರಿಯಿಂದ ವಶ ಪಡಿಸಿಕೊಂಡಿದ್ದ ದಾಖಲೆಗಳ ತನಿಖೆಯಿಂದ ಮೇಲ್ನೋಟಕ್ಕೆ ಆಪಾದಿತರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು, ಮತ್ತು ಕ್ರಿಮಿನಲ್ ಅಪರಾಧ ಎಸಗಿರುವುದು ಸ್ಪಷ್ಟವಾಗಿದೆ ಎಂದು ಸಿಬಿಐ ಈ ಹಿಂದೆ ತಿಳಿಸಿತ್ತು.

ಕುಮಾರ್ ಅವರ ದೆಹಲಿಯ ಕಚೇರಿಯ ಮೇಲೆ ಸಿಬಿಐ ಡಿಸೆಂಬರ್ ೧೫ರಂದು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

"ಯಾವುದೇ ನೋಟಿಸ್ ನೀಡದೆ ದೆಹಲಿ ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿಗಳಿಗೆ ಕರೆ ಮಾಡಿ ಸಿಬಿಐ ವಿಚಾರಣೆಗೆ ಕರೆದಿದೆ. ಈ ಹಿಂದೆ ಇತರ ಮಂತ್ರಿಗಳ ಸಿಬ್ಬಂದಿಗಳನ್ನು ಹೀಗೆಯೇ ಕರೆಯಲಾಗಿತ್ತು" ಎಂದು ಕೇಜ್ರಿವಾಲ್ ಮಂಗಳವಾರ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಿರುವ ಸಿಬಿಐ ಅಧಿಕಾರಿ, ನಾವು ಕರೆದಿರುವುದು ರಾಜೇಂದ್ರ ಕುಮಾರ್ ಅವರ ಸಿಬ್ಬಂದಿಗಳನ್ನು ಮಾತ್ರ, ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿಗಳನ್ನಲ್ಲ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT