ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಸಿ ಬಿ ಐನಿಂದ ಕೇಜ್ರಿವಾಲ್ ಪ್ರಧಾನ ಕಾರ್ಯದರ್ಶಿಯವರ ಸಿಬ್ಬಂದಿಗಳ ವಿಚಾರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಸಿಬ್ಬಂದಿಗಳನ್ನು ಸಿಬಿಐ ಮಂಗಳವಾರ ವಿಚಾರಣೆಗೆ ಒಳಪಡಿಸಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಸಿಬ್ಬಂದಿಗಳನ್ನು ಸಿಬಿಐ ಮಂಗಳವಾರ ವಿಚಾರಣೆಗೆ ಒಳಪಡಿಸಿದೆ. ಇದು ರಾಜೇಂದ್ರ ಕುಮಾರ್ ಅವರ ವಿರುದ್ಧ ಆರೋಪಿಸಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿರುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ರಾಜೇಂದ್ರ ಕುಮಾರ್ ಅವರ ೨-೩ ಸಿಬ್ಬಂದಿಗಳನ್ನು ವಿಚಾರಣೆಗೆ ಕರೆಸಲಾಗಿತ್ತು" ಎಂದು ಹೆಸರು ಹೇಳಲು ಇಚ್ಛಿಸಿದ ಸಿಬಿಐ ಅಧಿಕಾರಿ ಹೇಳಿದ್ದಾರೆ.

ಕುಮಾರ್ ಅವರ ಕಚೇರಿಯಿಂದ ವಶ ಪಡಿಸಿಕೊಂಡಿದ್ದ ದಾಖಲೆಗಳ ತನಿಖೆಯಿಂದ ಮೇಲ್ನೋಟಕ್ಕೆ ಆಪಾದಿತರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು, ಮತ್ತು ಕ್ರಿಮಿನಲ್ ಅಪರಾಧ ಎಸಗಿರುವುದು ಸ್ಪಷ್ಟವಾಗಿದೆ ಎಂದು ಸಿಬಿಐ ಈ ಹಿಂದೆ ತಿಳಿಸಿತ್ತು.

ಕುಮಾರ್ ಅವರ ದೆಹಲಿಯ ಕಚೇರಿಯ ಮೇಲೆ ಸಿಬಿಐ ಡಿಸೆಂಬರ್ ೧೫ರಂದು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

"ಯಾವುದೇ ನೋಟಿಸ್ ನೀಡದೆ ದೆಹಲಿ ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿಗಳಿಗೆ ಕರೆ ಮಾಡಿ ಸಿಬಿಐ ವಿಚಾರಣೆಗೆ ಕರೆದಿದೆ. ಈ ಹಿಂದೆ ಇತರ ಮಂತ್ರಿಗಳ ಸಿಬ್ಬಂದಿಗಳನ್ನು ಹೀಗೆಯೇ ಕರೆಯಲಾಗಿತ್ತು" ಎಂದು ಕೇಜ್ರಿವಾಲ್ ಮಂಗಳವಾರ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಿರುವ ಸಿಬಿಐ ಅಧಿಕಾರಿ, ನಾವು ಕರೆದಿರುವುದು ರಾಜೇಂದ್ರ ಕುಮಾರ್ ಅವರ ಸಿಬ್ಬಂದಿಗಳನ್ನು ಮಾತ್ರ, ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿಗಳನ್ನಲ್ಲ ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!