ರವಿಶಂಕರ್ ಗುರೂಜಿ 
ಪ್ರಧಾನ ಸುದ್ದಿ

ಆರ್ಟ್‌ ಆಫ್ ಲಿವಿಂಗ್‌ ನಿಂದ ಇಂದು 25 ಲಕ್ಷ, ಬಾಕಿ 4.75 ಕೋಟಿ ದಂಡ ಮುಂದಿನ 3 ವಾರಗಳಲ್ಲಿ ಪಾವತಿ

'ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಈಗ ಸ್ವಲ್ಪ ನಿರಾಳವಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ) ಇಂದಿನಿಂದ...

ನವದೆಹಲಿ: 'ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಈಗ ಸ್ವಲ್ಪ ನಿರಾಳವಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ) ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 'ವಿಶ್ವ ಸಂಸ್ಕೃತಿ ಉತ್ಸವ'ಕ್ಕೆ ವಿಧಿಸಿದ್ದ 5 ಕೋಟಿ ರುಪಾಯಿ ದಂಡದ ಮೊತ್ತವನ್ನು ಕಟ್ಟಲು 'ಆರ್ಟ್‌ ಆಫ್ ಲಿವಿಂಗ್‌ನ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಅವರಿಗೆ ಮೂರು ವಾರಗಳ ಕಾಲವಕಾಶ ನೀಡಿದೆ.
ಆರ್ಟ್ ಆಫ್ ಲಿವಿಂಗ್ ಇಂದು 25 ಲಕ್ಷ ರುಪಾಯಿ ದಂಡವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಟ್ಟಲಿದ್ದು, ಬಾಕಿ 4.75 ಕೋಟಿ ರುಪಾಯಿಯನ್ನು ಮುಂದಿನ ಮೂರು ವಾರಗಳಲ್ಲಿ ಪಾವತಿಸಲಿದೆ.
ವಿಶ್ವ ಸಂಸ್ಕೃತಿ ಉತ್ಸವದಿಂದ ಪರಿಸರ ನಾಶವಾಗುತ್ತದೆ ಎಂದು ಆರೋಪಿಸಿ ಪರಿಸರ ವಾದಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎನ್ ಜಿಟಿ, 5 ಕೋಟಿ ರುಪಾಯಿ ದಂಡ ಸೇರಿದಂತೆ ಕೆಲವು ಷರತ್ತಿನೊಂದಿಗೆ ವಿಶ್ವ ಸಂಸ್ಕೃತಿ ಉತ್ಸವ ನಡೆಸಲು ಅನುಮತಿ ನೀಡಿತ್ತು. ಅಲ್ಲದೆ ಇಂದು ಸಂಜೆ 5 ಗಂಟೆಯೊಳಗೆ ದಂಡದ ಮೊತ್ತವನ್ನು ಕಟ್ಟುವಂತೆ ಸೂಚಿಸಿತ್ತು. ಆದರೆ ಇಂದು ಸಂಜೆಯೊಳಗೆ 5 ಕೋಟಿ ರುಪಾಯಿ ದಂಡ ಕಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಲವಕಾಶ ನೀಡಿ ಎಂದು  ಆರ್ಟ್ ಆಫ್ ಲಿವಿಂಗ್ ನ್ಯಾಯಾಧೀಕರಣಕ್ಕೆ ಮನವಿ ಮಾಡಿತ್ತು. 
ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಕರಣ, ಇಂದು 25 ಲಕ್ಷ ರುಪಾಯಿ ಹಾಗೂ ಬಾಕಿ 4.75 ಕೋಟಿ ರುಪಾಯಿಯನ್ನು ಮುಂದಿನ ಮೂರು ವಾರಗಳಲ್ಲಿ ಪಾವತಿಸುವಂತೆ ಸೂಚಿಸಿತು. ಇದಕ್ಕೆ ಆರ್ಟ್ ಆಫ್ ಲಿವಿಂಗ್ ಸಹ ಒಪ್ಪಿಗೆ ಸೂಚಿಸಿದೆ.
ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಇಂದು ಸಂಜೆ 5 ಗಂಟೆಯೊಳಗೆ ದಂಡದ ಮೊತ್ತವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಟ್ಟುವಲ್ಲಿ ವಿಫಲವಾದರೆ ಸಂಸ್ಕೃತಿ ಉತ್ಸವಕ್ಕೆ ನೀಡಿದ್ದ ಅನುಮತಿಯನ್ನು ಹಿಂಪಡೆಯುವುದಾಗಿ ಎನ್ ಜಿಟಿ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿತ್ತು. ಆದರೆ ಇಂದು ಮತ್ತೆ ಮೂರು ವಾರಗಳ ಕಾಲವಕಾಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT