ವೇದಿಕೆಯಲ್ಲಿ ಪ್ರಧಾನಿ ಮೋದಿ ಹಾಗೂ ರವಿಶಂಕರ್ ಗುರೂಜಿ 
ಪ್ರಧಾನ ಸುದ್ದಿ

ವಿಶ್ವ ಸಂಸ್ಕೃತಿ ಉತ್ಸವ ಆರಂಭ, ಸದ್ಯದಲ್ಲೇ ಪ್ರಧಾನಿ ಮೋದಿ ಭಾಷಣ

ದೇಶ ಮತ್ತು ವಿದೇಶಗಳ ಸಾವಿರಾರು ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನದೊಂದಿಗೆ ದೆಹಲಿಯ ಯಮುನಾ ನದಿ ದಂಡೆಯ ಮೇಲೆ...

ನವದೆಹಲಿ: ದೇಶ ಮತ್ತು ವಿದೇಶಗಳ ಸಾವಿರಾರು ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನದೊಂದಿಗೆ ದೆಹಲಿಯ ಯಮುನಾ ನದಿ ದಂಡೆಯ ಮೇಲೆ 'ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಆಯೋಜಿಸಿರುವ 'ವಿಶ್ವ ಸಂಸ್ಕೃತಿ ಉತ್ಸವ'ಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ  ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಿದರು.
ಸುಮಾರು 155 ದೇಶಗಳ ಭಕ್ತರು ವಿಶ್ವ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುತ್ತಿದ್ದು, ವಿಶ್ವದ ಸುಮಾರು 36 ಸಾವಿರ ಕಲಾವಿದರು ಈ  ಮೇಳದಲ್ಲಿ ಪ್ರದರ್ಶನ ನೀಡಲಿದ್ದಾರೆ.
ವಿಶ್ವ ಸಂಸ್ಕೃತಿ ಉತ್ಸವದಿಂದ ಪರಿಸರ ಹಾನಿಯಾಗುತ್ತದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ 5 ಕೋಟಿ ರುಪಾಯಿ ದಂಡ ಸೇರಿದಂತೆ ಕೆಲವು ಷರತ್ತಿನೊಂದಿಗೆ ವಿಶ್ವ ಸಂಸ್ಕೃತಿ ಉತ್ಸವ ನಡೆಸಲು ಅನುಮತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT