ದೆಹಲಿ ವಿಶ್ವವಿದ್ಯಾಲಯದ ಮಾಜಿ ಉಪನ್ಯಾಸಕ ಎಸ್ ಎ ಆರ್ ಗಿಲಾನಿ 
ಪ್ರಧಾನ ಸುದ್ದಿ

ದೇಶದ್ರೋಹದ ಆರೋಪ: ಎಸ್ ಎ ಆರ್ ಗಿಲಾನಿಗೆ ಜಾಮೀನು

ದೇಶದ್ರೋಹದ ಆರೋಪದ ಮೇಲೆ ಬಂಧಿತರಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಉಪನ್ಯಾಸಕ ಎಸ್ ಎ ಆರ್ ಗಿಲಾನಿ ಅವರಿಗೆ ಕೋರ್ಟ್ ಶನಿವಾರ ಜಾಮೀನು

ನವದೆಹಲಿ: ದೇಶದ್ರೋಹದ ಆರೋಪದ ಮೇಲೆ ಬಂಧಿತರಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಉಪನ್ಯಾಸಕ ಎಸ್ ಎ ಆರ್ ಗಿಲಾನಿ ಅವರಿಗೆ ಕೋರ್ಟ್ ಶನಿವಾರ ಜಾಮೀನು ನೀಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೀಪಕ್ ಗಾರ್ಗ್, ಗಿಲಾನಿ ಅವರಿಗೆ ಜಾಮೀನು ನೀಡಿದ್ದಾರೆ.

ಗೀಲಾನಿ ವಿರುದ್ಧದ ಆರೋಪಗಳು ಘೋರವಾದವು ಎಂದು ದೆಹಲಿ ಪೊಲೀಸರು ಕೋರ್ಟ್ ಗೆ ಶುಕ್ರವಾರ ತಿಳಿಸಿದ್ದರು.

ಸಂಸತ್ತಿನ ಮೇಲಿನ ದಾಳಿಯ ತಪ್ಪಿತಸ್ಥ ಅಪ್ಜಲ್ ಗುರುವನ್ನು ಗಲ್ಲಿಗೇರಿಸಿದ್ದ ದಿನದ ನೆನಪಿಗಾಗಿ ದೆಹಲಿ ಪ್ರೆಸ್ ಕ್ಲಬ್ ನಲ್ಲಿ ಫೆಬ್ರವರಿ ೯ ರಂದು ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ದೇಶದ್ರೋಹದ ಆರೋಪದ ಮೇಲೆ ದೆಹಲಿ ಪೊಲೀಸರು ಅಪ್ಜಲ್ ಗುರು ಅವರನ್ನು ಬಂಧಿಸಿದ್ದರು. ಅಪ್ಜಲ್ ಗುರು ಬುಧವಾರ ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದರು.

ತಾವು ಸಲ್ಲಿಸಿದ್ದ ಹೊಸ ಅರ್ಜಿಯಲ್ಲಿ, ಫೆಬ್ರವರಿ ೧೬ ರಿಂದ ತಮ್ಮನ್ನು ನ್ಯಾಯಂಗ ಬಂಧನದಲ್ಲಿ ಇರಿಸಿರುವುದರಿಂದ ಯಾವುದೇ ಉಪಯೋಗವಾಗಿಲ್ಲ. ತಮ್ಮ ವಿರುದ್ಧ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಅವರು ತಿಳಿಸಿದ್ದರು.

ಈ ಹಿಂದೆ ಫೆಬ್ರವರಿ ೧೯ ರಂದು ಮೆಜೆಸ್ಟ್ರೇಟ್, ಗಿಲಾನಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರು. ಗೀಲಾನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ದೇಶದ್ರೋಹಿ ಘೋಷಣೆಗಳನ್ನು ಕೂಗಿದ್ದರು ಎಂದು ದೆಹಲಿ ಪೊಲೀಸರು ವಾದಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT