ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ರಸಾಯನಶಾಸ್ತ್ರ ಪರೀಕ್ಷೆ ರದ್ದು, ಶೀಘ್ರದಲ್ಲೇ ಮರು ಪರೀಕ್ಷೆ

ಪರೀಕ್ಷೆ ಆರಂಭವಾಗುವ ಮುನ್ನವೇ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಯಾಗಿಗ್ದು, ರಾಜ್ಯಾದ್ಯಂತ ನಡೆದ ರಸಾಯನಶಾಸ್ತ್ರ...

ಬೆಂಗಳೂರು: ಪರೀಕ್ಷೆ ಆರಂಭವಾಗುವ ಮುನ್ನವೇ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಯಾಗಿಗ್ದು, ರಾಜ್ಯಾದ್ಯಂತ ನಡೆದ ರಸಾಯನಶಾಸ್ತ್ರ ಪರೀಕ್ಷೆಯನ್ನು ಪದವಿ ಪೂರ್ವ ಶಿಕ್ಷೆ ಇಲಾಖೆ ಸೋಮವಾರ ರದ್ದುಗೊಳಿಸಿದೆ.
ಇಂದು ಬೆಳಗ್ಗೆ ಪರೀಕ್ಷೆ ಆರಂಭವಾಗುವ ಮುನ್ನವೇ ಕೆಲವು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರಸಾಯನಶಾಸ್ತ್ರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಶೀಘ್ರವೇ ಮರು ಪರೀಕ್ಷೆ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಆಕೃತಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಪಿಯು ಮಂಡಳಿ ತನಿಖೆಗೆ ಆದೇಶಿಸಿದ್ದು, ಈ ಸಂಬಂಧ ಈಗಾಗಲೇ ಎರಡು ಕೇಂದ್ರಗಳ ಮುಖ್ಯ ಅಧೀಕ್ಷಕರನ್ನು ಹಾಗೂ ಸಹ ಮುಖ್ಯ ಅಧೀಕ್ಷರನ್ನು ಅಮಾನತುಗೊಳಿಸಲಾಗಿದೆ ಎಂದು ಪಲ್ಲವಿ ಆಕೃತಿ ಅವರು ತಿಳಿಸಿದ್ದಾರೆ. ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಎರಡೂ ಕೇಂದ್ರಗಳ ಬದಲಾವಣೆಗೂ ಪಿಯು ಮಂಡಳಿ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಬಳ್ಳಾರಿಯ ಗಾಂಧಿನಗರದಲ್ಲಿರುವ ಮಹಿಳಾ ಪದವಿ ಪೂರ್ವ ಕಾಲೇಜ್ ನಲ್ಲಿ ಇಂದು ಬೆಳಗ್ಗೆ ಪರೀಕ್ಷೆ ಆರಂಭವಾಗುವ ಮುನ್ನವೇ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಲಾಗಿದೆ ಎಂದು ಪಲ್ಲವಿ ಆಕೃತಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ನೀವು ಮಾಡಿದರೆ ರಾಜತಂತ್ರ? ಮತಗಳ ಮೈಲೇಜ್‌ಗಾಗಿ ತಾಯಿ ಹೆಸರನ್ನು ಬಳಸುವುದು ಪ್ರೀತಿಯಲ್ಲ, ಕ್ರೂರ: PM ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನು ಮುಲಾಜಿಲ್ಲದೇ ಸೀಜ್ ಮಾಡಿ; ಪೊಲೀಸರಿಗೆ CM ಡಿಕೆಶಿ ಖಡಕ್ ಸೂಚನೆ

NSA ಅಜಿತ್ ದೋವಲ್ ಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಅಮಿತ್ ಶಾ