ಡಿ.ಕೆ.ರವಿ ಅವರ ಪೋಷಕರು 
ಪ್ರಧಾನ ಸುದ್ದಿ

ವಿಧಾನಸೌಧ ಮುತ್ತಿಗೆಗೆ ಯತ್ನ, ಡಿ.ಕೆ.ರವಿ ಪೋಷಕರು ಸೇರಿ ಹಲವರ ಬಂಧನ

ಸಿಬಿಐ ತನಿಖಾ ವರದಿ ಬಹಿರಂಗಕ್ಕೆ ಆಗ್ರಹಿಸಿ ಕಳೆದ ಒಂದು ವಾರದಿಂದ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಿಗೂಢವಾಗಿ...

ಬೆಂಗಳೂರು: ಸಿಬಿಐ ತನಿಖಾ ವರದಿ ಬಹಿರಂಗಕ್ಕೆ ಆಗ್ರಹಿಸಿ ಕಳೆದ ಒಂದು ವಾರದಿಂದ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಿಗೂಢವಾಗಿ ಮೃತಪಟ್ಟ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪೋಷಕರು ಮಂಗಳವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಆನಂದ್ ರಾವ್ ಸರ್ಕಲ್ ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ಡಿ.ಕೆ.ರವಿ ಅವರ ತಾಯಿ ಗೌರಮ್ಮ, ತಂದೆ ಕರಿಯಪ್ಪ ಹಾಗೂ ಸಹೋದರ ಡಿ.ಕೆ.ರಮೇಶ್ ಅವರು ಸೇರಿದಂತೆ ಹಲವು ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ರೇಸ್ ಕೋರ್ಸ್ ರಸ್ತೆಯಲ್ಲೇ ತಡೆದರು. ಇದರಿಂದ ಆಕ್ರೋಶಗೊಂಡ ಗೌರಮ್ಮ ಡಿಸಿಪಿ ಸಂದೀಪ್ ಪಾಟೀಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು, 
ಡಿ.ಕೆ.ರವಿ ಪೋಷಕರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು, ಆಡುಗೋಡಿಯ ಸಿಆರ್ ಮೈದಾನಕ್ಕೆ ಕರೆದೊಯ್ದಿದ್ದಾರೆ.
2015 ಮಾ.16 ರಂದು ಡಿ.,ಕೆ ರವಿ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಬೆಂಗಳೂರಿನ ಫ್ಲ್ಯಾಟ್ ವೊಂದರಲ್ಲಿ ರವಿ ಅವರ ಮೃತ ದೇಹ ಸಿಕ್ಕಿತ್ತು. ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ವಹಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT