ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪಿ ಅಪ್ಪಾ ರಾವ್ 
ಪ್ರಧಾನ ಸುದ್ದಿ

ವೆಮುಲಾ ವಿವಾದದ ನಂತರ ಮತ್ತೆ ಅಧಿಕಾರ ಸ್ವೀಕರಿಸಿದ ಉಪಕುಲಪತಿ ಅಪ್ಪಾ ರಾವ್

ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಯ ನಂತರ ಟೀಕೆಗಳ ಮಹೂಪೂರ ಹರಿದುಬಂದು,

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆಯ ನಂತರ ಟೀಕೆಗಳ ಮಹೂಪೂರ ಹರಿದುಬಂದು, ರಜೆಯ ಮೇಲೆ ತೆರಳಿದ್ದ ಉಪಕುಲಪತಿ ಪಿ ಅಪ್ಪಾ ರಾವ್, ಮಂಗಳವಾರ ಮತ್ತೆ ಸ್ಥಾನಕ್ಕೆ ಹಿಂದಿರುಗಿದ್ದಾರೆ.

ಹಂಗಾಮಿ ಉಪಕುಲಪತಿ ಡಾ. ವಿಪಿನ್ ಶ್ರೀವಾಸ್ತವ ಕೂಡ ರಜೆಯ ಮೇಲೆ ತೆರಳಿದ್ದರಿಂದ ಎಂ ಪೆರಿಸ್ವಾಮಿ, ರಾವ್ ಅವರ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು.

ದಲಿತ ವಿದ್ಯಾರ್ಥಿಗಳನ್ನು ಉಚ್ಛಾಟನೆ ಮಾಡಿದ್ದಕ್ಕೆ ರಾವ್ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಆ ವಿದ್ಯಾರ್ಥಿಯಲ್ಲಿ ಒಬ್ಬರಾದ ರೋಹಿತ್ ಜನವರಿ ೧೭ ರಂದು ಆತ್ಮಹತ್ಯೆ ಮಾಡಿಕೊಂಡ ನಂತರವಂತೂ ರಾವ್ ವಿರುದ್ಧ ವಿದ್ಯಾರ್ಥಿಗಳು ಹರಿಹಾಯ್ದಿದ್ದರು ಮತ್ತು ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಉಪಕುಲಪತಿ ಸುದ್ದಿಗೋಷ್ಠಿಗೂ ಮುಂಚಿತವಾಗಿ ಪ್ರತಿಭಟನಾ ವಿದ್ಯಾರ್ಥಿಗಳ ದಾಳಿ
ಮತ್ತೆ ಉಪಕುಲಪತಿ ಸ್ಥಾನ ಅಲಂಕರಿಸಿದ ಮೇಲೆ ಅಪ್ಪ ರಾವ್ ಮಂಗಳವಾರ ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಆದರೆ ಈ ನಡೆಯನ್ನು ವಿರೋಧಿಸುತ್ತಿರುವ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸ್ಥಳಕ್ಕೆ ಮೊದಲೇ ತೆರಳಿ ದಾಳಿ ನಡೆಸಿದರು ಎನ್ನಲಾಗಿದೆ. ಅಲ್ಲಿ ಗಾಜಿನ ಕಿಟಕಿ, ಟಿವಿಗಳು ಮತ್ತಿತರ ವಸ್ತುಗಳನ್ನು ಹಾನಿ ಮಾಡಲಾಗಿದೆ ಮತ್ತು ಅಪ್ಪಾರಾವ್ ವಿರುದ್ಧ ಘೋಷಣೆಗಳನ್ನು ಕೂಗಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT