ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪಿ ಅಪ್ಪಾ ರಾವ್ 
ಪ್ರಧಾನ ಸುದ್ದಿ

ವೆಮುಲಾ ವಿವಾದದ ನಂತರ ಮತ್ತೆ ಅಧಿಕಾರ ಸ್ವೀಕರಿಸಿದ ಉಪಕುಲಪತಿ ಅಪ್ಪಾ ರಾವ್

ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆಯ ನಂತರ ಟೀಕೆಗಳ ಮಹೂಪೂರ ಹರಿದುಬಂದು,

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆಯ ನಂತರ ಟೀಕೆಗಳ ಮಹೂಪೂರ ಹರಿದುಬಂದು, ರಜೆಯ ಮೇಲೆ ತೆರಳಿದ್ದ ಉಪಕುಲಪತಿ ಪಿ ಅಪ್ಪಾ ರಾವ್, ಮಂಗಳವಾರ ಮತ್ತೆ ಸ್ಥಾನಕ್ಕೆ ಹಿಂದಿರುಗಿದ್ದಾರೆ.

ಹಂಗಾಮಿ ಉಪಕುಲಪತಿ ಡಾ. ವಿಪಿನ್ ಶ್ರೀವಾಸ್ತವ ಕೂಡ ರಜೆಯ ಮೇಲೆ ತೆರಳಿದ್ದರಿಂದ ಎಂ ಪೆರಿಸ್ವಾಮಿ, ರಾವ್ ಅವರ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು.

ದಲಿತ ವಿದ್ಯಾರ್ಥಿಗಳನ್ನು ಉಚ್ಛಾಟನೆ ಮಾಡಿದ್ದಕ್ಕೆ ರಾವ್ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಆ ವಿದ್ಯಾರ್ಥಿಯಲ್ಲಿ ಒಬ್ಬರಾದ ರೋಹಿತ್ ಜನವರಿ ೧೭ ರಂದು ಆತ್ಮಹತ್ಯೆ ಮಾಡಿಕೊಂಡ ನಂತರವಂತೂ ರಾವ್ ವಿರುದ್ಧ ವಿದ್ಯಾರ್ಥಿಗಳು ಹರಿಹಾಯ್ದಿದ್ದರು ಮತ್ತು ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಉಪಕುಲಪತಿ ಸುದ್ದಿಗೋಷ್ಠಿಗೂ ಮುಂಚಿತವಾಗಿ ಪ್ರತಿಭಟನಾ ವಿದ್ಯಾರ್ಥಿಗಳ ದಾಳಿ
ಮತ್ತೆ ಉಪಕುಲಪತಿ ಸ್ಥಾನ ಅಲಂಕರಿಸಿದ ಮೇಲೆ ಅಪ್ಪ ರಾವ್ ಮಂಗಳವಾರ ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಆದರೆ ಈ ನಡೆಯನ್ನು ವಿರೋಧಿಸುತ್ತಿರುವ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸ್ಥಳಕ್ಕೆ ಮೊದಲೇ ತೆರಳಿ ದಾಳಿ ನಡೆಸಿದರು ಎನ್ನಲಾಗಿದೆ. ಅಲ್ಲಿ ಗಾಜಿನ ಕಿಟಕಿ, ಟಿವಿಗಳು ಮತ್ತಿತರ ವಸ್ತುಗಳನ್ನು ಹಾನಿ ಮಾಡಲಾಗಿದೆ ಮತ್ತು ಅಪ್ಪಾರಾವ್ ವಿರುದ್ಧ ಘೋಷಣೆಗಳನ್ನು ಕೂಗಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT