ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಹೈದರಾಬಾದ್ ವಿವಿ ಉದ್ವಿಗ್ನ; ತರಗತಿಗಳು ರದ್ದು; ಹೊರಗಿನವರಿಗೆ ಪ್ರವೇಶ ನಿಷಿದ್ದ

ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಅಪ್ಪ ರಾವ್, ರಜೆಯಿಂದ ಹಿಂದಿರುಗಿ ತಮ್ಮ ಸ್ಥಾನವನ್ನು ಮತ್ತೆ ಅಲಂಕರಿಸಿರುವುದರಿಂದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗಿದ್ದು,...

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಅಪ್ಪ ರಾವ್, ರಜೆಯಿಂದ ಹಿಂದಿರುಗಿ ತಮ್ಮ ಸ್ಥಾನವನ್ನು ಮತ್ತೆ ಅಲಂಕರಿಸಿರುವುದರಿಂದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗಿದ್ದು, ಉದ್ವಿಗ್ನ ವಾತಾವರಣ ಉಂಟಾಗಿದೆ ಎಂದು ತಿಳಿದುಬಂದಿದೆ. ನಾಲ್ಕು ದಿನಗಳವರೆಗೆ ತರಗತಿಗಳನ್ನು ರದ್ದುಪಡಿಸಿದ್ದು, ಹೊರಗಿನಿಂದ ಬೇರ್ಯಾರೂ ವಿಶ್ವವಿದ್ಯಾಲಯದ ಆವರಣ ಪ್ರವೇಶಿಸದಂತೆ ಅಧಿಕಾರಿಗಳು ತಡೆ ಹಾಕಿದ್ದಾರೆ.

ಮುಖ್ಯ ದ್ವಾರ ಮತ್ತು ಇತರ ಸಣ್ಣ ದ್ವಾರಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದು, ಮಾಧ್ಯಮದವರನ್ನು ಕೂಡ ವಿಶ್ವವಿದ್ಯಾಲಯ ಆವರಣ ಪ್ರವೇಶಿಸದಂತೆ ತಡೆಯಲಾಗಿದೆ. ನೆನ್ನೆ ಉಪಕುಲಪತಿಯವರ ಪತ್ರಿಕಾ ಗೋಷ್ಠಿಗೂ ಮುಂಚಿತವಾಗಿ ಕೆಲವು ವಿದ್ಯಾರ್ಥಿಗಳು ಅವರ ನಿವಾಸದಲ್ಲಿ ನಡೆಸಿದ ದಾಂಧಲೆಯಿಂದ ಸೋಮವಾರದವರೆಗೆ ತರಗತಿಗಳನ್ನು ರದ್ದುಮಾಡಲಾಗಿದೆ. "ಪರಿಸ್ಥಿಯನ್ನು ನಿಭಾಯಿಸಲು ಮಾರ್ಚ್ ೨೩ ರಿಂದ ೨೬ರವರೆಗೆ ತರಗತಿಗಳನ್ನು ರದ್ದುಪಡಿಸಲಾಗಿದೆ. ವಿಶ್ವವಿದ್ಯಾಲಯದ ಅವಾರಣದೊಳಗೆ ಯಾವುದೇ ರಾಜಕೀಯ ಪಕ್ಷವಾಗಲಿ, ಮಾಧ್ಯಮಗಳಾಗಲಿ, ಇನ್ಯಾರೇ ಹೊರಗಿನವರಾಗಲೀ ಒಳಗೆ ಬರದಂತೆ ತಡೆಯಲೂ ನಿರ್ಧಾರ ತೆಗೆದುಕೊಂಡಿದ್ದೇವೆ" ಎಂದು ವಿಶ್ವವಿದ್ಯಾಲಯಕ್ಕೆ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಮುಖಂಡ ಕನ್ಹಯ್ಯ ಕುಮಾರ್ ಬರಲಿದ್ದಾರೆ ಎಂಬ ಸುದ್ದಿಯ ನಡುವೆ ರಿಜಿಸ್ಟಾರ್ ಎಂ ಸುಧಾಕರ್ ಹೇಳಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪಡೆಗಳನ್ನು ವಿಶ್ವವಿದ್ಯಾಲಯದ ಸುತ್ತಮುತ್ತ ನೇಮಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. "ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪಡೆಗಳನ್ನು ನೇಮಿಸಲಾಗಿದೆ" ಎಂದು ಸೈದರಾಬಾದ್ ಜಂಟಿ ಪೊಲೀಸ್ ಮಹಾನಿರ್ದೇಶಕ ಶಶಿಧರ್ ರೆಡ್ಡಿ ಹೇಳಿದ್ದಾರೆ.

ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಬಂದಿದ್ದ ಕಾಂಗ್ರೆಸ್ ಮುಖಂಡ ವಿ ಹನುಮಂತ ರಾವ್ ಅವರನ್ನು ಪ್ರವೇಶ ದ್ವಾರದಲ್ಲಿಯೇ ತಡೆಯಲಾಗಿದೆ. ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ನೆನ್ನೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಉಪಕುಲಪತಿಗಳ ಮನೆಯ ಮೇಲೆ ದಾಳಿ ಮಾಡಿ ಕಿಟಕಿ ಗಾಜುಗಳು, ಟಿವಿ ಮತ್ತಿತರ ವಸ್ತುಗಳನ್ನು ಧ್ವಂಸ ಮಾಡಿದ್ದರು.

ಜನವರಿ ೧೭ ರಂದು ವಿದ್ಯಾರ್ಥಿನಿಲಯದಿಂದ ಉಚ್ಛಾಟಿತಗೊಂಡಿದ್ದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಉಪಕುಲಪತಿ ಅಪ್ಪ ರಾವ್ ಅವರನ್ನು ಕೂಡಲೇ ಬಂಧಿಸಬೇಕೆಂದು ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದರು. ಆದರೆ ರಜೆಯ ಮೇಲೆ ತೆರಳಿದ್ದ ಅಪ್ಪ ರಾವ್ ನೆನ್ನೆ ಮತ್ತೆ ಅಧಿಕಾರ ಹಿಂದಕ್ಕೆ ಪಡೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT