ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ದೆಹಲಿ ಬಜೆಟ್: ಪುರಸಭೆಗಳಿಗೆ ೧೦೦೦ಕೋಟಿ ಹೆಚ್ಚುವರಿ ಅನುದಾನ

ದೆಹಲಿ ಪುರಸಭೆಗಳಿಗೆ ಹೆಚ್ಚುವರಿ ೧೦೦೦ ಕೋಟಿ ರೂ ಅನುದಾನ ನೀಡುವುದಾಗಿ ದೆಹಲಿ ವಿತ್ತ ಸಚಿವ ಮನೀಶ್ ಸಿಸೋದಿಯಾ ಸೋಮವಾರ ಘೋಷಿಸಿದ್ದಾರೆ.

ನವದೆಹಲಿ: ದೆಹಲಿ ಪುರಸಭೆಗಳಿಗೆ ಹೆಚ್ಚುವರಿ ೧೦೦೦ ಕೋಟಿ ರೂ ಅನುದಾನ ನೀಡುವುದಾಗಿ ದೆಹಲಿ ವಿತ್ತ ಸಚಿವ ಮನೀಶ್ ಸಿಸೋದಿಯಾ ಸೋಮವಾರ ಘೋಷಿಸಿದ್ದಾರೆ.

"ಕಳೆದ ವರ್ಷ ದೆಹಲಿ ಪುರಸಭೆಗಳಿಗೆ ಬಜೆಟ್ ಅನುದಾನ ೫೯೦೮ಕೋಟಿ ಇತ್ತು. ಇದನ್ನು ನಂತರ ೫೯೯೯ಕೋಟಿಗೆ ಏರಿಸಲಾಯಿತು. ಈ ವರ್ಷ ಇದನ್ನು ೬೯೧೯ ಕೋಟಿಗೆ ಹೆಚ್ಚಿಸಲು ನಿರ್ಧರಿಸಿದ್ದೇವೆ" ಎಂದು ದೆಹಲಿ ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಸಿಸೋದಿಯಾ ಹೇಳಿದ್ದಾರೆ.

ಬಿಜೆಪಿ ನಿಯಂತ್ರಣದಲ್ಲಿರುವ ಪುರಸಭೆಗಳನ್ನುದ್ದೇಶಿಸಿ, ಈ ಹಣವನ್ನು ಸದ್ಬಳಕೆ ಮಾಡಿಕೊಳ್ಳಲು ಆಗ್ರಹಿಸಿದ್ದಾರೆ.

"ಈ ಹಣವನ್ನು ಸರಿಯಾಗಿ ಉಪಯೋಗಿಸಿಕೊಂಡು, ಪುರಸಭೆಗಳು ತಮ್ಮ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲಿದ್ದಾರೆ ಎಂದು ನಂಬುತ್ತೇನೆ. ಇದು ಸಾರ್ವಜನಿಕರ ಹಣ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿ ಈ ಹಣವನ್ನು ಪೋಲು ಮಾಡಬಾರದು" ಎಂದು ಕಿವಿಮಾತು ಹೇಳಿದ್ದಾರೆ.

ದೆಹಲಿಯಲ್ಲಿ ವೈಫೈ ಸೌಕರ್ಯದ ಬಗ್ಗೆ ಮಾತನಾಡಿದ ಅವರು ಈಗಿನ ಯೋಜನೆಗಳನ್ನು ಪರಿಶೀಲಿಸಿ ಇನ್ನೂ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲಿದ್ದೇವೆ ಎಂದು ತಿಳಿಸಿದ್ದಾರೆ. "ಬಸ್ ಗಳಲ್ಲಿ ಮತ್ತು ಕೆಲವು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ವೈಫೈ ಸೇವೆಯನ್ನು ಒದಗಿಸುತ್ತಿದ್ದೇವೆ. ಈ ಯೋಜನೆಗಳು ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಇನ್ನೂ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲಿದ್ದೇವೆ" ಎಂದು ಮನೀಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT