ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಜಾಮೀನು

ಹೈದರಾಬಾದ್ ವಿಶ್ವವಿದ್ಯಾಲಯದ ೨೫ ವಿದ್ಯಾರ್ಥಿಗಳು ಮತ್ತು ಇಬ್ಬರು ಉಪನ್ಯಾಸಕರಿಗೆ ಕೋರ್ಟ್ ಜಾಮೀನು ನೀಡಿದೆ. ಉಪಕುಲಪತಿ ಅಪ್ಪಾರಾವ್ ಅವರ ನಿವಾಸದ ಮೇಲಿನ...

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾಲಯದ ೨೫ ವಿದ್ಯಾರ್ಥಿಗಳು ಮತ್ತು ಇಬ್ಬರು ಉಪನ್ಯಾಸಕರಿಗೆ ಕೋರ್ಟ್ ಜಾಮೀನು ನೀಡಿದೆ. ಉಪಕುಲಪತಿ ಅಪ್ಪಾರಾವ್ ಅವರ ನಿವಾಸದ ಮೇಲಿನ ದಾಳಿಯ ಆರೋಪದ ಮೇಲೆ ಪೊಲೀಸರು ಇವರನ್ನು ಬಂಧಿಸಿದ್ದರು. ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಹಿನ್ನಲೆಯಲ್ಲಿ, ಎರಡು ತಿಂಗಳ ರಜೆಯ ನಂತರ ತಮ್ಮ ಸ್ಥಾನಕ್ಕೆ ಉಪಕುಲಪತಿ ಹಿಂದಿರುಗಿರುವುದನ್ನು ಇವರು ವಿರೋಧಿಸುತ್ತಿದ್ದರು.

ತೆಲಂಗಾಣ ಸರ್ಕಾರ ಜಾಮೀನು ನಿರಾಕರಿಸಲು ವಾದ ಮಾಡುವುದರಿಂದ ಹಿಂದುಳಿದಿದ್ದರಿಂದ ಮಿಯಾಪುರದ ೨೫ನೇ ಮೆಟ್ರೋಪಾಲಿಟನ್ ಮೆಜೆಸ್ಟ್ರೆಟ್ ನ್ಯಾಯಾಲಯ ಜಾಮೀನು ಆದೇಶ ನೀಡಿದೆ.

೫೦೦೦ ರೂ ಜಾಮೀನು ನೀಡಿ, ಈ ಪ್ರಕರಣ ಬಗೆಹರಿಯುವವರಿಗೆ ಗಾಚಿಬೌಲಿ ಪೊಲೀಸ್ ಠಾಣೆಗೆ ಪ್ರತಿವಾರ ಹಾಜರಾಗುವಂತೆ ನಿಯಮ ಹೇರಿ ಕೋರ್ಟ್ ಈ ಜಾಮೀನು ನೀಡಿದೆ.

ಇದಕ್ಕೂ ಮುಂಚಿತವಾಗಿ ಜಾಮೀನು ನಿರಾಕರಿಸುವಂತೆ ಪಬ್ಲಿಕ್ ಪ್ರಾಸೆಕ್ಯೂಟರ್ ಯಾವುದೇ ಅರ್ಜಿ ಸಲ್ಲಿಸದಿದ್ದರಿಂದ ಜಾಮೀನು ಆದೇಶ ಸುಗಮವಾಗಿದೆ.

ಸದ್ಯಕ್ಕೆ ಚೆರ್ಲಾಪಲ್ಲಿ ಜೈಲಿನಲ್ಲಿ ಬಂಧಿತರಾಗಿರುವ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಸೋಮವಾರ ತಡರಾತ್ರಿ ಅಥವಾ ಮಂಗಳವಾರ ಬೆಳಗ್ಗೆ ಬಿಡುಗಡೆಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT