ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಮೋದಿ ಪಾಕಿಸ್ತಾನಕ್ಕೆ ಶರಣಾಗಿದ್ದಾರೆ: ಕೇಜ್ರಿವಾಲ್

ಜನವರಿಯಲ್ಲಿ ಭಾರತದ ಪಠಾನ್ ಕೋಟ್ ನ ವಾಯುನೆಲೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯ ತನಿಖೆ ನಡೆಸಲು, ಪಾಕಿಸ್ತಾನದ ತನಿಖಾದಳಕ್ಕೆ ಅವಕಾಶ ನೀಡಿರುವ ಕೇಂದ್ರ

ನವದೆಹಲಿ: ಜನವರಿಯಲ್ಲಿ ಭಾರತದ ಪಠಾನ್ ಕೋಟ್ ನ ವಾಯುನೆಲೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯ ತನಿಖೆ ನಡೆಸಲು, ಪಾಕಿಸ್ತಾನದ ತನಿಖಾದಳಕ್ಕೆ ಅವಕಾಶ ನೀಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿರುವ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶರಣಾಗಿದ್ದಾರೆ ಎಂದು ಸೋಮವಾರ ಟೀಕಿಸಿದ್ದಾರೆ.

ಪಾಕಿಸ್ತಾನ ಭಾರತದ ವಿರುದ್ಧದ ಭಯೋತ್ಪಾದಕರಿಗೆ ನೆಲೆ ನೀಡಿದೆ ಮತ್ತು ಈಗ ಅವರೇ ಪ್ರಾಯೋಜಿಸಿರುವ ಭಯೋತ್ಪಾದನೆಯನ್ನು ತನಿಖೆ ಮಾಡಲು ಪಾಕಿಸ್ತಾನದ ಭದ್ರತಾ ಮತ್ತು ಬೇಹುಗಾರಿಕಾ ದಳಕ್ಕೆ ಅವಕಾಶ ಕೊಟ್ಟಿರುವುದು ಹೇಗೆ ಎಂದು ಕೇಜ್ರಿವಾಲ್ ಮಾಧ್ಯಮಗಳ ಮುಂದೆ ಪ್ರಶ್ನಿಸಿದ್ದಾರೆ.

"ಐ ಎಸ್ ಐ (ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ) ಈ ದಾಳಿಗೆ ಕಾರಣ ಎಂದು ಹೇಳುತ್ತಿದ್ದೇವೆ. ಇದು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ. ಈಗ ಈ ನಿಲುವು ಬದಲಾಗಿರುವುದು ಹೇಗೆ?" ಎಂದು ಪ್ರಶ್ನಿಸಿರುವ ಆಮ್ ಆದ್ಮಿ ಪಕ್ಷದ ಅಧ್ಯಕ್ಷ "ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಶರಣಾಗಿದ್ದಾರೆ" ಎಂದಿದ್ದಾರೆ.

ಜನವರಿ ೨ ರಂದು ನಡೆದ ದಾಳಿಯ ತನಿಖೆ ನಡೆಸಲು ಪಾಕಿಸ್ತಾನ ತಂಡ ಭಾರತಕ್ಕೆ ಬಂದಿಳಿದಿದೆ. ಈ ದಾಳಿಯಲ್ಲಿ ಭಾರತದ ಏಳು ಭದ್ರತಾ ಸಿಬ್ಬಂದಿ ಮತ್ತು ದಾಳಿ ಮಾಡಿದ ಭಯೋತ್ಪಾದಕರು ಮೃತರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT