ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ತೃತೀಯಲಿಂಗಿಗಳಿಗೆ ಉದ್ಯೋಗ ಮೀಸಲಾತಿ ವಿಸ್ತರಿಸಿದ ಬಿಹಾರ

ತೃತೀಯಲಿಂಗಿಗಳಿಗೆ ಉದ್ಯೋಗ ಮೀಸಲಾತಿ ಮತ್ತು ಅವರಿಗಾಗಿ ಕ್ಷೇಮಾಭಿವೃದ್ಧಿ ಮಂಡಲಿ ಸ್ಥಾಪಿಸುವುದಾಗಿ ಬಿಹಾರ ಸರ್ಕಾರ ಘೋಷಿಸಿದೆ.

ಪಾಟ್ನಾ: ತೃತೀಯಲಿಂಗಿಗಳಿಗೆ ಉದ್ಯೋಗ ಮೀಸಲಾತಿ ಮತ್ತು ಅವರಿಗಾಗಿ ಕ್ಷೇಮಾಭಿವೃದ್ಧಿ ಮಂಡಲಿ ಸ್ಥಾಪಿಸುವುದಾಗಿ ಬಿಹಾರ ಸರ್ಕಾರ ಘೋಷಿಸಿದೆ.

"ಸರ್ಕಾರಿ ಉದ್ಯೋಗಗಳಲ್ಲಿ ತೃತೀಯಲಿಂಗಿಗಳಿಗೆ ಮೀಸಲಾತಿ ನೀಡಲಾಗುವುದು ಹಾಗೂ ಬಿಹಾರ ರಾಜ್ಯ ಕಲ್ಯಾಣ ಮಂಡಲಿಯನ್ನು ಸ್ಥಾಪಿಸಲಾಗುವುದು" ಎಂದು ಬಿಹಾರದ ಸಮಾಜಿಕ ಅಭಿವೃದ್ಧಿ ಸಚಿವ ಮಂಜು ವರ್ಮಾ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ಕಳೆದ ವರ್ಷ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮಂಗಳಮುಖಿಯರನ್ನು ತೃತೀಯಲಿಂಗಿಗಳೆಂದು ಗುರುತಿಸಿ, ಅವರು ಮುಖ್ಯವಾಹಿನಿಯ ಭಾಗವಾಗಲೆಂಬ ಭರವಸೆಯಿಂದ ಅವರಿಗಾಗಿ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲು ಉದ್ಯೋಗ ಮೀಸಲಾತಿ ಕಲ್ಪಿಸಲಾಗುತ್ತಿದೆ.

ಕಳೆದ ವರ್ಷ ರಾಜ್ಯ ಸರ್ಕಾರ ಅವರನ್ನು ತೃತೀಯಲಿಂಗಿಗಳೆಂದು ಗುರುತಿಸಿ, ಅವರನ್ನು ಅನೆಕ್ಷರ್ ೧೧, ಇತರೆ ಹಿಂದುಳಿದ ವರ್ಗಕ್ಕೆ ಸೇರಿಸಲಾಗಿತ್ತು.

ಈಗ ಅಧಿಕಾರಿಗಳ ಪ್ರಕಾರ ಇನ್ನು ಮುಂದೆ ತೃತೀಯಲಿಂಗಿಗಳನ್ನು ಹಿಂದುಳಿದ ವರ್ಗಗಳ ಸ್ಕೆಡ್ಯೂಲ್ ೨ ಕ್ಕೆ ಸೇರಿಸಿ ಅದರ ನಿಯಮಗಳಂತೆ ಅವರಿಗೆ ಮೀಸಲಾತಿ ಕಲ್ಪಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT