ಪಿಯು ಬೋರ್ಡ್ 
ಪ್ರಧಾನ ಸುದ್ದಿ

ಮತ್ತೆ ಪ್ರಶ್ನೆ ಪತ್ರಿಕೆ ಸೋರಿಕೆ: ಪಿಯು ಪರೀಕ್ಷಾ ವಿಭಾಗದ 40 ಅಧಿಕಾರಿಗಳ ಅಮಾನತು

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಯುಸಿ ಪರೀಕ್ಷಾ ವಿಭಾಗದ...

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಯುಸಿ ಪರೀಕ್ಷಾ ವಿಭಾಗದ 40 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.
ಜಂಟಿ ನಿರ್ದೇಶಕ ಕೆ.ಎನ್. ರಂಗನಾಥ್, ಅಧೀಕ್ಷಕರ ಆಪ್ತ ಸಹಾಯಕಿ ಜಯಲಕ್ಷ್ಮಿ, ಉಪ ನಿರ್ದೇಶಕ ರವೀಂದ್ರ ಆರ್ ಕೊನ್ನೂರು, ಸಹಾಯಕ ನಿರ್ದೇಶಕ ಜಂಬಣ್ಣ ಎಸ್, ಸಹಾಯಕ ನಿರ್ದೇಶಕ ಸುರೇಶ್, ಸಹಾಯಕ ನಿರ್ದೇಶಕಿ ಗೀತಾದೇವಿ ಎಸ್, ಸಹಾಯಕ ನಿರ್ದೇಶಕ ಸುಬ್ರಹ್ಮಣ್ಯ.ಆರ್  ಅಧೀಕ್ಷಕ ವಿಶ್ವೇಶ್ವರ ಎಸ್.ಬಿ., ಅಧೀಕ್ಷಕಿ ಹೇಮಲತಾ ವೈ.ಎಂ, ಪ್ರಥಮ ದರ್ಜೆ ಸಹಾಯಕಿ ಅನುಪಮಾ ಎಂ, ದ್ವಿತೀಯ ದರ್ಜೆ ಸಹಾಯಕರಾದ ಸಣ್ಣಸ್ವಾಮಿ ಎಂ.ಆರ್, ಗುರುರಾಜ್ ಎಸ್. ವಸಂತಕುಮಾರ್ ನಾಯಕ್ , ರಮೇಶ್ ಎನ್ ಹಾಗೂ ಗ್ರೂಪ್ ಡಿ ನೌಕರರಾದ ಅಂಬಿಕಾ ಕೆ.ಬಿ, ಭಾನುಮೂರ್ತಿ ಕೆ.ಎಚ್ ಸೇರಿದಂತೆ 40 ಅಧಿಕಾರಿಗಳನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ
ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.
ಇತ್ತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಪಿಯು ಬೋರ್ಡ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT