ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಹೆಚ್ಚಿನ ಬರ ಪರಿಹಾರಕ್ಕಾಗಿ ಪ್ರಧಾನಿ ಬಳಿಗೆ ನಿಯೋಗ: ಸಿದ್ದರಾಮಯ್ಯ

ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ನೆರವು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು...

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ನೆರವು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ ನೆರವು ನೀಡಿದೆ. ಆದರೆ ರಾಜ್ಯದಲ್ಲಿ ತೀವ್ರ ಬರ ಇರುವುದರಿಂದ ಹೆಚ್ಚಿನ ನೆರವು ನೀಡುವಂತೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಸಿಎಂ ಹೇಳಿದ್ದಾರೆ.
ಇಂದು ರಾಜಭವನದಲ್ಲಿ ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಂಗಾರು ಮಳೆ ವೈಫಲ್ಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1473 ಕೋಟಿ ರು.ಗಳನ್ನು ಹಾಗೂ ಹಿಂಗಾರು ಮಳೆ ವೈಫಲ್ಯದ ಹಿನ್ನೆಲೆಯಲ್ಲಿ 723 ಕೋಟಿ ರು.ಗಳನ್ನು ನೀಡುವುದಾಗಿ ತಿಳಿಸಿದೆ ಎಂದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಬರ ವಿಚಾರದಲ್ಲಿ ಯಡಿಯೂರಪ್ಪ ರಾಜಕಾರಣ ಮಾಡುತ್ತಿದ್ದಾರೆ. ನಾವೇನೂ ಕಾಟಾಚಾರಕ್ಕೆ ಬರ ಅಧ್ಯಯನ ನಡೆಸುತ್ತಿಲ್ಲ, ಯಡಿಯೂರಪ್ಪನವರಿಗೆ ಮಾಹಿತಿ ಕೊರತೆ ಇದೆ. ಸರಿಯಾಗಿ ತಿಳಿದುಕೊಂಡು ಮಾತನಾಡಲಿ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ಬರ ಅಧ್ಯಯನಕ್ಕೆ ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿಗಳು ಈಗಾಗಲೇ ಒಂದು ವರದಿಯನ್ನು ನೀಡಿವೆ ಅದನ್ನು ಕೇಂದ್ರಕ್ಕೆ ಕಳುಹಿಸಿದ್ದೇವೆ ಪೂರ್ಣ ಪ್ರಮಾಣದ ವರದಿಯನ್ನು ಈ ಸಮಿತಿಗಳು ಸದ್ಯದಲ್ಲೇ ನೀಡಲಿವೆ ಎಂದರು.
ಬರ ಪರಿಹಾರ ಕಾಮಗಾರಿಗಳಿಗೆ ಬಳಕೆಯಾಗದೇ ಉಳಿದಿರುವ ಹಣವನ್ನು ವಾಪಸ್ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿಲ್ಲ, ಬಳಕೆಯಾಗದ ಹಣವನ್ನು ಬೇರೆ ಜಿಲ್ಲೆಗಳಿಗೆ ಹಂಚಿಕೆ ಮಾಡಲು ಹಣ ಮರಳಿಸುವಂತೆ ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT