ಜವಾಹರ್ ಲಾಲ್ ವಿಶ್ವವಿದ್ಯಾಲಯ 
ಪ್ರಧಾನ ಸುದ್ದಿ

ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡನ ಸ್ಥಿತಿ ಸ್ಥಿರ: ವೈದ್ಯ

ಉಪವಾಸ ಸತ್ಯಾಗ್ರಹದಿಂದ ಆರೋಗ್ಯದಲ್ಲಿ ಅಸ್ಥಿರತೆ ಕಂಡು ಆಸ್ಪತ್ರೆಗೆ ದಾಖಲಾಗಿದ್ದ ಜವಾಹರ್ ಲಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮುಖಂಡ ಸೌರಭ್ ಶರ್ಮಾ ಅವರು ಈಗ ಸ್ಥಿರವಾಗಿದ್ದಾರೆ

ನವದೆಹಲಿ: ಉಪವಾಸ ಸತ್ಯಾಗ್ರಹದಿಂದ ಆರೋಗ್ಯದಲ್ಲಿ ಅಸ್ಥಿರತೆ ಕಂಡು ಆಸ್ಪತ್ರೆಗೆ ದಾಖಲಾಗಿದ್ದ ಜವಾಹರ್ ಲಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮುಖಂಡ ಸೌರಭ್ ಶರ್ಮಾ ಅವರು ಈಗ ಸ್ಥಿರವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ.

"ಈಗ ಸೌರಭ್ ಶರ್ಮಾ ಅವರ ಸ್ಥಿತಿ ಸ್ಥಿರವಾಗಿದೆ. ಅವರ ರಕ್ತದಲ್ಲಿ ಸಕ್ಕರೆ ಅಂಶ ಇಳಿದಿತ್ತು ಆದರೆ ಈಗ ಸಾಧಾರಣ ಸ್ಥಿತಿಗೆ ಮರಳಿದೆ. ಅವರನ್ನು ವೈದ್ಯರು ಪರಿಶೀಲನೆಯಲ್ಲಿಟ್ಟಿದ್ದು, ಆತಂಕ ಪಡುವ ಅಗತ್ಯವಿಲ್ಲ" ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹದಿಂದ ಆರೋಗ್ಯದಲ್ಲಿ ವ್ಯತ್ಯಯ ಕಂಡಿದ್ದರಿಂದ ಜೆ ಎನ್ ಎಸ್ ಸಿ ಯು ಪ್ರಧಾನ ಕಾರ್ಯದರ್ಶಿ ಶರ್ಮಾ ಅವರನ್ನು ಸೋಮವಾರ ಮಧ್ಯಾಹ್ನ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಫೆಬ್ರವರಿ ೯ ರ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದರಿಂದ ವಿಶ್ವವಿದ್ಯಾಲಯದ ಉನ್ನತ ಸಮಿತಿ ಶರ್ಮಾ ಅವರಿಗೆ ೧೦೦೦೦ ರೂ ದಂಡ ಹಾಕಿತ್ತು. ಇದನ್ನು ವಿರೋಧಿಸಿ ಅವರು ಮತ್ತು ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ಸದಸ್ಯರು ಅನಿರ್ಧಿಷ್ಟ ಕಾಲಾವಧಿಯವರೆಗೆ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಫೆಬ್ರವರಿ ೯ ರ ಘಟನೆಯಿಂದಾಗಿ ಕೆಲವು ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿರುವುದನ್ನು ವಿರೋಧಿಸಿ ಜೆ ಎನ್ ಎಸ್ ಸಿ ಯು ಅಧ್ಯಕ್ಷ ಕನ್ಹಯ್ಯ ಕುಮಾರ್ ಸೇರಿದಂತೆ ಇತರ ಜೆ ಎನ್ ಎಸ್ ಸಿ ಯು ಸದಸ್ಯರು ಹಾಗೂ ಎ ಬಿ ವಿ ಪಿ ಸದಸ್ಯರು ಕೂಡ ಉಪವಾಸ ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT