ಶಿವಕುಮಾರಸ್ವಾಮಿ 
ಪ್ರಧಾನ ಸುದ್ದಿ

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕಿಂಗ್ ಪಿನ್ ಶಿವಕುಮಾರಸ್ವಾಮಿ ಸಿಐಡಿ ವಶಕ್ಕೆ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರಸ್ವಾಮಿ ಅಲಿಯಾಸ್ ಗುರೂಜಿಯ...

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರಸ್ವಾಮಿ ಅಲಿಯಾಸ್ ಗುರೂಜಿಯನ್ನು ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ(ಕೋಕಾ) ಕೋರ್ಟ್ 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.
ಕಳೆದ ಒಂದು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಲೀಕ್ ಕಿಂಗ್ ಪಿನ್ ಶಿವಕುಮಾರನನ್ನು ಸಿಐಡಿ ಪೊಲೀಸರು ನಿನ್ನೆ ರಾತ್ರಿ ಬನ್ನೇರುಘಟ್ಟ ರಸ್ತೆಯ ಗಾರೇಬಾವಿಪಾಳ್ಯದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಂಧಿಸಿದ್ದರು.
ಇಂದು ಮಧ್ಯಾಹ್ನ ಆರೋಪಿಯನ್ನು ಬೆಂಗಳೂರಿನ ವಿಶೇಷ ಕೋಕಾ ಕೋರ್ಟ್ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಕೆ.ನಾಯಕ್ ಅವರು, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೇ 12ರವರೆಗೆ ಸಿಐಡಿ ವಶಕ್ಕೆ ನೀಡಿದರು. 
ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಬೇಕಾಗಿದ್ದು, ಪ್ರಮುಖ ಆರೋಪಿ ಶಿವಕುಮಾರನನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು.
ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿದ್ದು, ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿದೆ, ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ. ಇದೀಗ ಪ್ರಮುಖ ಆರೋಪಿಯನ್ನೂ ವಶಕ್ಕೆ ಪಡೆದಿದ್ದು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT