ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸರ್ಕಾರಿ ಬಂಗಲೆ ತೆರವುಗೊಳಿಸುವಂತೆ ಮಾಜಿ ಸಂಸದನಿಗೆ ಕೋರ್ಟ್ ಸೂಚನೆ

ಅಧಿಕಾರಿಗಳು ಸೂಚಿಸಿದ್ದರೂ ಇನ್ನು ಸರ್ಕಾರಿ ಬಂಗಲೆಯನ್ನು ತೊರೆಯದೆ ವಾಸವಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಅಖಿಲೇಶ್ ದಾಸ್ ಗುಪ್ತಾ ಅವರಿಗೆ ಬಂಗಲೆ ತೆರವುಗೊಳಿಸಲು ಕೋರ್ಟ್

ನವದೆಹಲಿ: ಅಧಿಕಾರಿಗಳು ಸೂಚಿಸಿದ್ದರೂ ಇನ್ನು ಸರ್ಕಾರಿ ಬಂಗಲೆಯನ್ನು ತೊರೆಯದೆ ವಾಸವಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಅಖಿಲೇಶ್ ದಾಸ್ ಗುಪ್ತಾ ಅವರಿಗೆ ಬಂಗಲೆ ತೆರವುಗೊಳಿಸಲು ಕೋರ್ಟ್ ಆದೇಶಿಸಿದೆ.

ನವೆಂಬರ್ ೨೦೦೨ ರಲ್ಲಿ ನೀಡಲಾಗಿದ್ದ ಲೋಧಿ ಎಸ್ಟೇಟ್ ೧೧, ಬಂಗಲೆಯನ್ನು ತೆರವುಗೊಳಿಸುವಂತೆ ಮಾಜಿ ಸಂಸದರಿಗೆ ಜಿಲ್ಲಾ ನ್ಯಾಯಾಧೀಶ ಅಮರ್ ನಾಥ್ ಆದೇಶಿಸಿದ್ದಾರೆ.

ನವೆಂಬರ್ ೧೯೯೬ ರಲ್ಲಿ ಸಂಸತ್ತಿನ ಮೇಲ್ಮನೆಗೆ ಕಾಂಗ್ರೆಸ್ ಸದಸ್ಯರಾಗಿ ಗುಪ್ತಾ ಆಯ್ಕೆಯಾಗಿದ್ದರು ಮತ್ತು ೨೦೦೨ರಲ್ಲಿ ಮರು ಆಯ್ಕೆಯಾಗಿದ್ದರು. ಮತ್ತೆ ೨೦೦೮ ರಲ್ಲಿ ಬಹುಜನ ಸಮಾಜ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಗುಪ್ತಾ ಅವರ ರಾಜ್ಯಸಭಾ ಅವಧಿ ನವೆಂಬರ್ ೨೦೧೪ ಕ್ಕೆ ಮುಗಿದಿತ್ತು ಆದರೆ ಮಾರ್ಚ್ ೨೫ ೨೦೧೫ ರವರೆಗೆ ಬಾಡಿಗೆ ನೀಡಿ ಬಂಗಲೆಯಲ್ಲಿ ಉಳಿಯಲಿ ರಾಜ್ಯ ಸಭಾ ಸೆಕ್ರೆಟರಿಯಟ್ ಅವಕಾಶ ನೀಡಿದ್ದರು. ನಂತರ ಈ ಅವಧಿಯನ್ನು ಜುನ್ ೨೬ ೨೦೧೫ರವರೆಗೆ ವಿಸ್ತರಿಸಲಾಗಿತ್ತು ಆದರೆ ನಂತರದ ಮನವಿಯನ್ನು ಸೆಕ್ರೆಟರಿಯಟ್ ಪುರಸ್ಕರಿಸಲಿಲ್ಲ. ಆದುದರಿಂದ ಜನವರಿ ೧೫ ೨೦೧೬ ರಂದು ಬಂಗಲೆ ತೊರೆಯುವಂತೆ ಅಧಿಕಾರಿಗಳು ಸೂಚಿಸಿದ್ದರು.

ನಂತರ ಗುಪ್ತ ಅವರು ತಾವು ಬಾಡಿಗೆ ನೀಡುತ್ತಿರುವುದರಿಂದ ಬಂಗಲೆಯಲ್ಲಿ ವಾಸಿಸಲು ಅವಕಾಶ ಕೋರಿ ದೆಹಲಿ ಕೋರ್ಟ್ ಮೊರೆ ಹೋಗಿದ್ದರು ಆದರೆ ಇದನ್ನು ತಿರಸ್ಕರಿಸಿದ ಕೋರ್ಟ್ ಬಂಗಲೆ ತೊರೆಯುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT