ವಿಶ್ವನಾಥ್ 
ಪ್ರಧಾನ ಸುದ್ದಿ

'420 ವಿಶ್ವನಾಥ್ ಗೆ ಧಿಕ್ಕಾರ' ಎಂದ ವ್ಯಕ್ತಿ ಮೇಲೆ ಬೆಂಬಲಿಗರಿಂದ ಹಲ್ಲೆ

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಘಟನೆ ಗುರುವಾರ ಬೆಂಗಳೂರಿನಲ್ಲಿ ನಡೆದಿದೆ. 
ಇಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವನಾಥ್ ಅವರು ಬರೆದಿರುವ 'ದಿ ಟಾಕಿಂಗ್ ಶಾಪ್' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದ ಕುರುಬರ ಸಂಘದ ಮುಖಂಡ ಶಿವರಾಮ್ ಅವರು '420 ವಿಶ್ವನಾಥ್ ಗೆ ಧಿಕ್ಕಾರ' ಎಂದು ಘೋಷಣೆ ಕೂಗಿದರು. ಇದರಿಂದ ಆಕ್ರೋಶಗೊಂಡ ಮಾಜಿ ಸಂಸದರ ಬೆಂಬಲಿಗರು, ಶಿವರಾಮ್ ಅವರ ಮೇಲೆ ಹಲ್ಲೆ ನಡೆಸಿ ತಳ್ಳಾಡಿದರು. ಅಲ್ಲದೆ ಅವಾಚ್ಯ ಶಬ್ಧಗಳಿಂದ ಅವರನ್ನು ನಿಂದಿಸಿದರು.
ವಿಶ್ವನಾಥ್ ಅವರು ಸಂಸದರಾಗಿದ್ದ ವೇಳೆ ಕುರುಬ ಸಮುದಾಯಕ್ಕೆ ಯಾವುದೇ ರೀತಿಯ ಕೊಡುಗೆಗಳನ್ನು ನೀಡಿಲ್ಲ. ಸಮುದಾಯದ ಏಳಿಗೆಗೆ ಬೇಕಾದ ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ಶಿವರಾಮ್ ಅವರು ವಿಶ್ವನಾಥ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT