ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಘಟನೆ ಗುರುವಾರ ಬೆಂಗಳೂರಿನಲ್ಲಿ ನಡೆದಿದೆ.
ಇಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವನಾಥ್ ಅವರು ಬರೆದಿರುವ 'ದಿ ಟಾಕಿಂಗ್ ಶಾಪ್' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದ ಕುರುಬರ ಸಂಘದ ಮುಖಂಡ ಶಿವರಾಮ್ ಅವರು '420 ವಿಶ್ವನಾಥ್ ಗೆ ಧಿಕ್ಕಾರ' ಎಂದು ಘೋಷಣೆ ಕೂಗಿದರು. ಇದರಿಂದ ಆಕ್ರೋಶಗೊಂಡ ಮಾಜಿ ಸಂಸದರ ಬೆಂಬಲಿಗರು, ಶಿವರಾಮ್ ಅವರ ಮೇಲೆ ಹಲ್ಲೆ ನಡೆಸಿ ತಳ್ಳಾಡಿದರು. ಅಲ್ಲದೆ ಅವಾಚ್ಯ ಶಬ್ಧಗಳಿಂದ ಅವರನ್ನು ನಿಂದಿಸಿದರು.
ವಿಶ್ವನಾಥ್ ಅವರು ಸಂಸದರಾಗಿದ್ದ ವೇಳೆ ಕುರುಬ ಸಮುದಾಯಕ್ಕೆ ಯಾವುದೇ ರೀತಿಯ ಕೊಡುಗೆಗಳನ್ನು ನೀಡಿಲ್ಲ. ಸಮುದಾಯದ ಏಳಿಗೆಗೆ ಬೇಕಾದ ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ಶಿವರಾಮ್ ಅವರು ವಿಶ್ವನಾಥ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos