ಸಂಸತ್ ಭವನ 
ಪ್ರಧಾನ ಸುದ್ದಿ

ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ

ಇತ್ತೀಚೆಗೆ ಸಾಲದ ದೊರೆ ವಿಜಯ ಮಲ್ಯ ಅವರ ರಾಜಿನಾಮೆಯಿಂದ ತೆರವಾದ ಸ್ಥಾನ ಸೇರಿದಂತೆ ರಾಜ್ಯಸಭೆಯ 57 ಸ್ಥಾನಗಳಿಗೆ ಗುರುವಾರ...

ನವದೆಹಲಿ: ಇತ್ತೀಚೆಗೆ ಸಾಲದ ದೊರೆ ವಿಜಯ ಮಲ್ಯ ಅವರ ರಾಜಿನಾಮೆಯಿಂದ ತೆರವಾದ ಸ್ಥಾನ ಸೇರಿದಂತೆ ರಾಜ್ಯಸಭೆಯ 57 ಸ್ಥಾನಗಳಿಗೆ ಗುರುವಾರ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದ್ದು, ಜೂನ್ 11 ರಂದು ಮತದಾನ ನಡೆಯಲಿದೆ.
ಚುನಾವಣಾ ಆಯೋಗ ರಾಜ್ಯಸಭೆಯ 57 ಸ್ಥಾನಗಳಿಗೆ ಮೇ 24 ರಂದು ಅಧಿಸೂಚನೆ ಪ್ರಕಟಿಸುತ್ತಿದ್ದು, ಮೇ 31 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ 15 ರಾಜ್ಯಗಳಲ್ಲಿ ಜೂನ್​ನಿಂದ ಆಗಸ್ಟ್ ವರೆಗೆ ತೆರವಾಗಲಿರುವ ಒಟ್ಟು 57 ರಾಜ್ಯಸಭಾ ಸದಸ್ಯರ ಸ್ಥಾನಗಳಿಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ.
57 ಸ್ಥಾನಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್​ನ ತಲಾ 14, ಬಿಎಸ್​ಪಿ 6, ಜೆಡಿಯು 6, ಎಸ್​ಪಿ, ಬಿಜೆಡಿ ಮತ್ತು ಎಐಎಡಿಎಂಕೆ ಪಕ್ಷಗಳ ತಲಾ 3 ಸ್ಥಾನಗಳಿಗೆ, ಡಿಎಂಕೆ, ಎನ್​ಸಿಪಿ ಮತ್ತು ಟಿಡಿಪಿ ಗಳ ತಲಾ 2 ಸ್ಥಾನ, ಶಿವಸೇನಾ 1 ಸ್ಥಾನ ಮತ್ತು ಸ್ವತಂತ್ರ ಅಭ್ಯರ್ಥಿ ವಿಜಯಮಲ್ಯ (ಮೇ 5 ರಂದು ರಾಜೀನಾಮೆ ನೀಡಿದ್ದರು) ಅವರಿಂದ ತೆರವಾಗಿದ್ದ ಸ್ಥಾನಗಳಿಗೆ ಈಗ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೇ 24 ರಂದು ಚುನಾವಣೆ ಅಧಿಸೂಚನೆ ಹೊರಡಲಿದೆ ಎಂದು ಆಯೋಗ ತಿಳಿಸಿದೆ.
ಅವಧಿ ಪೂರ್ಣಗೊಂಡ ಪ್ರಮುಖರು
ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು, ಬೀರೇಂದ್ರಸಿಂಗ್, ಸುರೇಶ್ ಪ್ರಭು, ನಿರ್ಮಲಾ ಸೀತಾರಾಮ್ ಪಿಯೂಷ್ ಗೋಯಲ್ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ, ಮಾಜಿ ಸಚಿವರಾದ ಜೈರಾಮ್ ರಮೇಶ್, ಜೆಡಿಯು ಮುಖಂಡ ಶರದ್ ಯಾದವ್ ಮತ್ತು ಹಿರಿಯ ವಕೀಲ ರಾಮ್ೇಠ್ಮಲಾನಿ ಅವರ ಅವಧಿ ಪೂರ್ಣಗೊಂಡಿದ್ದು ನಿವೃತ್ತರಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT