ಪಾಕಿಸ್ತಾನ ಪ್ರಧಾನಮಂತ್ರಿಯವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಜ್ ಅಜೀಜ್ 
ಪ್ರಧಾನ ಸುದ್ದಿ

ಭಾರತ ಕ್ಷಿಪಣಿ ಪರೀಕ್ಷೆಯನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರಶ್ನಿಸಲಿದ್ದೇವೆ: ಸರ್ತಜ್ ಅಜೀಜ್

ಭಾರತ ಭಾನುವಾರ ನಡೆಸಿದ ಸೂಪರ್ಸಾನಿಕ್ ಬೇಧಕ ಕ್ಷಿಪಣಿ ಪರೀಕ್ಷೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ, ಪಾಕಿಸ್ತಾನ ಪ್ರಧಾನಮಂತ್ರಿಯವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಜ್ ಅಜೀಜ್,

ಇಸ್ಲಮಾಬಾದ್:  ಭಾರತ ಭಾನುವಾರ ನಡೆಸಿದ ಸೂಪರ್ಸಾನಿಕ್ ಬೇಧಕ ಕ್ಷಿಪಣಿ ಪರೀಕ್ಷೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ, ಪಾಕಿಸ್ತಾನ ಪ್ರಧಾನಮಂತ್ರಿಯವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಜ್ ಅಜೀಜ್, ಅಂತರಾಷ್ಟ್ರೀಯ ವೇದಿಕೆಯಲ್ಲಿ ಈ ಬೆಳವಣಿಗೆಯನ್ನು ಪ್ರಶ್ನಿಸಲಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ.

ಈ ಭಾಗದಲ್ಲಿ ರಾಜಕೀಯ ಶಕ್ತಿಯ ಸಮತೋಲನಕ್ಕೆ ಭಾರತ ನಡೆಸಿದ ಕ್ಷಿಪಣಿ ಪರೀಕ್ಷೆ ಧಕ್ಕೆ ತರಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಅಜೀಜ್, ಉನ್ನತ ತಂತ್ರಜ್ಞಾನವನ್ನು ಬಳಸಿಕೊಂಡು ಪಾಕಿಸ್ತಾನ ಕೂಡ ತನ್ನ ರಕ್ಷಣಾ ತಂತ್ರಜ್ಞಾನವನ್ನು ವೃದ್ಧಿಸಿಕೊಳ್ಳಲಿದೆ ಎಂದು ಅಜೀಜ್ ಹೇಳಿರುವುದಾಗಿ ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ.

ಚೈನಾವನ್ನು ಹತ್ತಿಕ್ಕಲು ಶಕ್ತಿಯುತ ಭಾರತದ ಅಗತ್ಯವಿದೆ ಎಂದು ವಾಶಿಂಗ್ಟನ್ ನ ಅಭಿಮತವಾಗಿರುವುದರಿಂದ ಭಾರತ ಅಮೆರಿಕಾದ ಸಹಕಾರವನ್ನು ಬಳಸಿಕೊಳ್ಳುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ.

ಈ ಬೆಳವಣಿಗೆಯ ವಿರುದ್ಧ ಅಂತರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸುವುದಾಗಿ ಕೂಡ ಅವರು ಹೇಳಿದ್ದಾರೆ.

ಭಾನುವಾರ ಒರಿಸ್ಸಾದ ಬಂದರಿನಿಂದ, ದೇಶದಲ್ಲೇ ಅಭಿವೃದ್ಧಿ ಪಡಿಸಲಾಗಿರುವ, ಒಳಬರುವ ಯಾವುದೇ ಬ್ಯಾಲ್ಲಿಸ್ಟಿಕ್ ಕ್ಷಿಪಣಿಯನ್ನು ಬೇಧಿಸಿ ನಾಶ ಮಾಡುವ ಶಕ್ತಿಯಿರುವ ಸೂಪರ್ಸಾನಿಕ್ ಬೇಧಕ ಕ್ಷಿಪಣಿಯ ಯಶಸ್ವಿ ಪರೀಕ್ಷೆಯನ್ನು ಬಾರತ ನಡೆಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT