ಪಾಕಿಸ್ತಾನ ಪ್ರಧಾನಮಂತ್ರಿಯವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಜ್ ಅಜೀಜ್ 
ಪ್ರಧಾನ ಸುದ್ದಿ

ಭಾರತ ಕ್ಷಿಪಣಿ ಪರೀಕ್ಷೆಯನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರಶ್ನಿಸಲಿದ್ದೇವೆ: ಸರ್ತಜ್ ಅಜೀಜ್

ಭಾರತ ಭಾನುವಾರ ನಡೆಸಿದ ಸೂಪರ್ಸಾನಿಕ್ ಬೇಧಕ ಕ್ಷಿಪಣಿ ಪರೀಕ್ಷೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ, ಪಾಕಿಸ್ತಾನ ಪ್ರಧಾನಮಂತ್ರಿಯವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಜ್ ಅಜೀಜ್,

ಇಸ್ಲಮಾಬಾದ್:  ಭಾರತ ಭಾನುವಾರ ನಡೆಸಿದ ಸೂಪರ್ಸಾನಿಕ್ ಬೇಧಕ ಕ್ಷಿಪಣಿ ಪರೀಕ್ಷೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ, ಪಾಕಿಸ್ತಾನ ಪ್ರಧಾನಮಂತ್ರಿಯವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಜ್ ಅಜೀಜ್, ಅಂತರಾಷ್ಟ್ರೀಯ ವೇದಿಕೆಯಲ್ಲಿ ಈ ಬೆಳವಣಿಗೆಯನ್ನು ಪ್ರಶ್ನಿಸಲಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ.

ಈ ಭಾಗದಲ್ಲಿ ರಾಜಕೀಯ ಶಕ್ತಿಯ ಸಮತೋಲನಕ್ಕೆ ಭಾರತ ನಡೆಸಿದ ಕ್ಷಿಪಣಿ ಪರೀಕ್ಷೆ ಧಕ್ಕೆ ತರಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಅಜೀಜ್, ಉನ್ನತ ತಂತ್ರಜ್ಞಾನವನ್ನು ಬಳಸಿಕೊಂಡು ಪಾಕಿಸ್ತಾನ ಕೂಡ ತನ್ನ ರಕ್ಷಣಾ ತಂತ್ರಜ್ಞಾನವನ್ನು ವೃದ್ಧಿಸಿಕೊಳ್ಳಲಿದೆ ಎಂದು ಅಜೀಜ್ ಹೇಳಿರುವುದಾಗಿ ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ.

ಚೈನಾವನ್ನು ಹತ್ತಿಕ್ಕಲು ಶಕ್ತಿಯುತ ಭಾರತದ ಅಗತ್ಯವಿದೆ ಎಂದು ವಾಶಿಂಗ್ಟನ್ ನ ಅಭಿಮತವಾಗಿರುವುದರಿಂದ ಭಾರತ ಅಮೆರಿಕಾದ ಸಹಕಾರವನ್ನು ಬಳಸಿಕೊಳ್ಳುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ.

ಈ ಬೆಳವಣಿಗೆಯ ವಿರುದ್ಧ ಅಂತರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸುವುದಾಗಿ ಕೂಡ ಅವರು ಹೇಳಿದ್ದಾರೆ.

ಭಾನುವಾರ ಒರಿಸ್ಸಾದ ಬಂದರಿನಿಂದ, ದೇಶದಲ್ಲೇ ಅಭಿವೃದ್ಧಿ ಪಡಿಸಲಾಗಿರುವ, ಒಳಬರುವ ಯಾವುದೇ ಬ್ಯಾಲ್ಲಿಸ್ಟಿಕ್ ಕ್ಷಿಪಣಿಯನ್ನು ಬೇಧಿಸಿ ನಾಶ ಮಾಡುವ ಶಕ್ತಿಯಿರುವ ಸೂಪರ್ಸಾನಿಕ್ ಬೇಧಕ ಕ್ಷಿಪಣಿಯ ಯಶಸ್ವಿ ಪರೀಕ್ಷೆಯನ್ನು ಬಾರತ ನಡೆಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT