ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮದ್ಯ ಉದ್ದಿಮೆಗೆ ನೀರು ಸರಬರಾಜು ನಿಲ್ಲಿಸುವಂತೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಮಹಾರಾಷ್ಟ್ರ ರಾಜ್ಯದಲ್ಲಿ ನೀರಿನ ತೊಂದರೆ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಮದ್ಯ ಉತ್ಪಾದನಾ ಸಂಸ್ಥೆಗಳಿಗೆ ನೀರು ಸರಬರಾಜನ್ನು ನಿಲ್ಲಿಸುವಂತೆ ಕೋರಿರುವ ಅರ್ಜಿಯನ್ನು ಮುಂದಿನ ವಾರ

ನವದೆಹಲಿ: ಮಹಾರಾಷ್ಟ್ರ ರಾಜ್ಯದಲ್ಲಿ ನೀರಿನ ತೊಂದರೆ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಮದ್ಯ ಉತ್ಪಾದನಾ ಸಂಸ್ಥೆಗಳಿಗೆ ನೀರು ಸರಬರಾಜನ್ನು ನಿಲ್ಲಿಸುವಂತೆ ಕೋರಿರುವ ಅರ್ಜಿಯನ್ನು ಮುಂದಿನ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಅರ್ಜಿದಾರ ಈ ವಿಷಯವನ್ನು ಕೋರ್ಟ್ ಗೆ ತಿಳಿಸಿ ಬೇಗನೆ ವಿಚಾರಣೆ ನಡೆಸುವಂತೆ ಕೋರಿದ್ದಕ್ಕೆ ನ್ಯಾಯಾಧೀಶ ಅಭಯ್ ಮನೋಹರ್ ಸಾಪ್ರೆ ಮುಂದಾಳತ್ವದ ಪೀಠ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.

ಮೇ ೧೦ ರಿಂದ ಜುಲೈ ಅಂತ್ಯದವರೆಗೆ ಬರಪೀಡಿತ ಮಾರಾಠಾವಾಡಾ ಪ್ರದೇಶದಲ್ಲಿ ಮದ್ಯ ಉದ್ದಿಮೆಗೆ ೬೦% ನೀರು ಕಡಿತಗೊಳಿಸುವಂತೆ ಮತ್ತು ಇತರ ಉದ್ದಿಮೆಗಳಿಗೆ ೨೫% ನೀರು ಕಡಿತಗೊಳಿಸುವಂತೆ ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠ ಆದೇಶ ನೀಡಿತ್ತು ಎನ್ನುವುದನ್ನು ಸುಪ್ರೀಮ್ ಕೋರ್ಟ್ ಗೆ ಅರ್ಜಿದಾರ ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾಗಿರುವ ಅರ್ಜಿದಾರರು ಈ ೪೦% ನೀರು ಸರಬರಾಜನ್ನು ಕೂಡ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ನೀರು ಪೋಲಾಗುವುದೆಂದು ಐಪಿಎಲ್ ಪಂದ್ಯಗಳನ್ನು ಮಹಾರಾಷ್ಟ್ರದಿಂದಾಚೆಗೆ ನಿಗದಿಪಡಿಸಲು ನೀಡಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಮ್ ಕೋರ್ಟ್ ಎತ್ತಿಹಿಡಿದಿದ್ದರಿಂದ ಈ ವಿಚಾರಣೆ ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT