ಕಿಮ್ಮನೆ ರತ್ನಾಕರ 
ಪ್ರಧಾನ ಸುದ್ದಿ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಪ್ರಥಮ

2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ,...

ಬೆಂಗಳೂರು: 2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಉಡುಪಿ ದ್ವಿತೀಯ ಹಾಗೂ ಮಂಗಳೂರು ತೃತೀಯ ಸ್ಥಾನ ಪಡೆದಿದೆ. ಇನ್ನೂ ಬಳ್ಳಾರಿ ಜಿಲ್ಲೆ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ.
ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಿಸಿದ್ದು, ಸಂಜೆ ನಾಲ್ಕು 4 ಗಂಟೆಯ ನಂತರ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 17ರಂದು ಅಂದರೆ ಮಂಗಳವಾರ ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು,
ಪ್ರತಿ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ. 82.64ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ. 75.84ರಷ್ಟು ವಿದ್ಯಾರ್ಥಿಗಳ ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು ಒಟ್ಟು ಶೇ.79.16ರಷ್ಟು ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕಿಂತ ಶೇ.2ರಷ್ಟು ಕಡಿಮೆ ಬಂದಿದೆ ಎಂದು ಶಿಕ್ಷಣ ಸಚಿವರು ಹೇಳಿದರು. ಇನ್ನೂ ಮೂರು ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದರು.
ಇದೇ ವೇಳೆ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಕಿಮ್ಮನೆ ರತ್ನಾಕರ, ಅನುತ್ತೀರ್ಣರಾದವರು ಧೈರ್ಯ ಕಳೆದುಕೊಳ್ಳುವುದು ಬೇಡ. ಜೂನ್ 20ರಂದು ಮರು ಪರೀಕ್ಷೆ ನಡೆಯಲಿದ್ದು ಮತ್ತೊಮ್ಮೆ ಯತ್ನಿಸಿ ಉತ್ತೀರ್ಣರಾಗಿ ಎಂದು ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ರಂಜನ್ ರಾಜ್ಯಕ್ಕೆ ಪ್ರಥಮ
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ಎಸ್.ರಂಜನ್ ಅವರು ಇದೇ ಮೊದಲ ಬಾರಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಇನ್ನು ಬೆಂಗಳೂರಿನ ಬನಶಂಕರಿಯ ಹೊಲಿ ಚೈಲ್ಡ್ ಶಾಲೆಯ ವಿದ್ಯಾರ್ಥಿನಿ ಸುಪ್ರಿತಾ ಅವರು 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು, karresults.nic.in OR sslc.kar.nic.in, http://kseeb.kar.nic.in/ ಮತ್ತು http://karresults.nic.in/ ಜಾಲತಾಣಗಳ ಮೂಲಕ ಪಡೆಯಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT