ಬಿಜೆಪಿ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ 
ಪ್ರಧಾನ ಸುದ್ದಿ

ಬಿಜೆಪಿ ಹೊಸದಾಗಿ ಒಂದು ರಾಜ್ಯ ಗೆದ್ದಿಗೆ, ಕಾಂಗ್ರೆಸ್ ಎರಡು ಕಳೆದುಕೊಂಡಿದೆ: ಜಾವ್ಡೇಕರ್

ಬಿಜೆಪಿ ಹೊಸದಾಗಿ ಒಂದು ರಾಜ್ಯವನ್ನು ಗೆದ್ದಿದ್ದರೆ, ಕಾಂಗ್ರೆಸ್ ಎರಡನ್ನು ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಗುರುವಾರ ವಿವಿಧ ರಾಜ್ಯಗಳ ವಿಧಾನಸಭಾ ಫಲಿತಾಂಶಗಳ

ನವದೆಹಲಿ: ಬಿಜೆಪಿ ಹೊಸದಾಗಿ ಒಂದು ರಾಜ್ಯವನ್ನು ಗೆದ್ದಿದ್ದರೆ, ಕಾಂಗ್ರೆಸ್ ಎರಡನ್ನು ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಗುರುವಾರ ವಿವಿಧ ರಾಜ್ಯಗಳ ವಿಧಾನಸಭಾ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪ್ರದರ್ಶನದ ಬಗ್ಗೆ ತೃಪ್ತಿ ವ್ಯಕ್ತಪಡಿಸಿರುವ ಜಾವ್ಡೇಕರ್ "ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದ ಎರಡು ರಾಜ್ಯಗಳನ್ನು ಕಳೆದುಕೊಂಡಿದೆ ಮತ್ತು ಬಿಜೆಪಿ ಒಂದನ್ನು ಗಳಿಸಿದೆ" ಎಂದಿದ್ದಾರೆ.

ರಾಜಕೀಯದಲ್ಲಿ ಯಾವತ್ತಿಗೂ ಜಯ ಗಳಿಸುವುದು ಗುರಿ, ಅದು ಸಾಧ್ಯವಾಗಿದ್ದರೆ ಗೆಳೆಯ ಪಕ್ಷವನ್ನು ಗೆಲ್ಲಿಸಿ ಶತ್ರು ಪಕ್ಷವನ್ನು ಸೋಲಿಸುವುದು ಗುರಿ ಎಂದಿದ್ದಾರೆ.

ಎ ಐ ಡಿ ಎಂ ಕೆ ಮತ್ತು ತೃಣಮೂಲ ಕಾಂಗ್ರೆಸ್ 'ಗೆಳೆಯ ಪಕ್ಷಗಳೇ' ಎಂಬ ಪ್ರಶ್ನೆಗೆ ಅವೆರಡು ಸ್ವತಂತ್ರ ಪಕ್ಷಗಳು ಎಂಬ ಉತ್ತರ ನೀಡಿದ್ದಾರೆ.

"ಶತ್ರುಗಳು ಎಡಪಕ್ಷಗಳು ಮತ್ತು ಕಾಂಗ್ರೆಸ್... ಅವರು ಸೋಲುತ್ತಾರೆ. ಟಿ ಎಂ ಸಿ ಮತ್ತು ಎ ಐ ಡಿ ಎಂ ಕೆ ಸ್ವತಂತ್ರ ಪಕ್ಷಗಳು ಅವರ ಆಯ್ಕೆಯ ಪ್ರಕಾರ ಆ ಪಕ್ಷಗಳು ಒಳ್ಳೆಯ ನಿರ್ಧಾರ ತೆಗೆದುಕೊಂಡಿವೆ" ಎಂದಿದ್ದಾರೆ.

ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಚುನಾವಣಾ ಉಸ್ತುವಾರಿಯನ್ನು ಕೂಡ ವಹಿಸಿದ್ದ ಜಾವ್ಡೇಕರ್ ಇದು ನಿರೀಕ್ಷಿತ ಫಲಿತಾಂಶ ಎಂದಿದ್ದಾರೆ.

"ಮಮತಾ ಮತ್ತು ಜಯಲಲಿತಾ ಅವರ ಗೆಲುವನ್ನು ಜನ ಮೊದಲೇ ಬೀದಿಗಳಲ್ಲಿ ಮಾತನಾಡುತ್ತಿದ್ದರು. ನಾನು ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರುವಾಗ, ಜನರೆಲ್ಲರೂ 'ಅಮ್ಮ', 'ಅಮ್ಮ' ಎನ್ನುತ್ತಿದ್ದರು" ಎಂದು ಕೂಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT