ಬೆಂಗಳೂರು: ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಎಡರಂಗ ಮೈತ್ರಿಕೂಟದ ಜೆಡಿಎಸ್ ಸಹ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಕಳೆದ ಮೇ 16ರಂದು ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಎಡರಂಗದೊಂದಿಗೆ ಮೈತ್ರಿ ಮಾಡಿಕೊಂಡು ಐದು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆ ಪೈಕಿ ಈಗ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೇರಳದಲ್ಲಿ ಒಂದು ವಾರಗಳ ಕಾಲ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು.
ಫಲಿತಾಂಶದ ಬಳಿಕ ಕೇರಳದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಎಡರಂಗ ನಾಯಕ ವಿ.ಎಸ್.ಅಚ್ಚುತಾನಂದನ್ ಅವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, ಭರ್ಜರಿ ಗೆಲುವು ಸಾಧಿಸಿದ ಎಡರಂಗ ಮೈತ್ರಿಕೂಟಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಜೆಡಿಎಸ್ ನಿಂದ ಕೇರಳ ತಿರುವಳ್ಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮ್ಯಾಥ್ಯೂ ಟಿ ಥಾಮಸ್, ಚಿತ್ತೂರಿ ಕ್ಷೇತ್ರದಿಂದ ಸ್ಪರ್ಥಿಸಿದ್ದ ಕೃಷ್ಣನ್ ಕುಟ್ಟಿ ಹಾಗೂ ವಡಕ್ಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ನ ಸಿ.ಕೆ.ನಾಣು ಅವರು ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos