ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ 
ಪ್ರಧಾನ ಸುದ್ದಿ

ಉತ್ತರ ಪ್ರದೇಶ ಚುನಾವಣಾ ತಂತ್ರ: ಬಿ ಎಸ್ ಪಿ ಶಾಸಕರಿಗೆ ದೆಹಲಿಗೆ ಬುಲಾವ್

೨೦೧೭ ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ತಂತ್ರಗಾರಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲು ಬಹುಜನ ಸಮಾಜ ಪಕ್ಷದ ಎಲ್ಲ ಶಾಸಕರಿಗೆ ಪಕ್ಷದ ಅಧ್ಯಕ್ಷೆ

ಲಕನೌ: ೨೦೧೭ ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ತಂತ್ರಗಾರಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲು ಬಹುಜನ ಸಮಾಜ ಪಕ್ಷದ ಎಲ್ಲ ಶಾಸಕರಿಗೆ ಪಕ್ಷದ ಅಧ್ಯಕ್ಷೆ ಮಾಯಾವತಿ ದೆಹಲಿಗೆ ಬುಲಾವ್ ನೀಡಿದ್ದಾರೆ.

ಚರ್ಚೆಗಳಿಗೆ ಪಕ್ಷದ ಕಚೇರಿಯ ಹಿರಿಯ ಅಧಿಕಾರಿಗಳನ್ನು ಕೂಡ ಹಾಜರಿರಲು ಪಕ್ಷದ ಅಧ್ಯಕ್ಷೆ ಸೂಚಿಸಿದ್ದಾರೆ.

ಮುಂಬರಲಿರುವ ರಾಜ್ಯಸಭಾ ಚುನಾವಣೆ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ತಂತ್ರಗಾರಿಕೆ ಈ ಚರ್ಚೆಯ ಮುಖ್ಯ ಉದ್ದೇಶವಾಗಿದೆ.

ಉತ್ತರ ಪ್ರದೇಶದಲ್ಲಿನ ಬಿ ಎಸ್ ಪಿ ಶಾಸಕರ ಸಂಖ್ಯೆಯ ಆಧಾರದ ಮೇಲೆ ಇಬ್ಬರು ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸಬಹುದಾಗಿದೆ. ಅದರಲ್ಲಿ ಸದ್ಯದ ಸಂಸದ ಸತೀಶ್ ಮಿಶ್ರಾ ಅವರನ್ನು ಮತ್ತೆ ಮರುನೇಮಕ ಮಾಡಲಿದೆ ಎಂದು ತಿಳಿದುಬಂದಿದೆ. ಮತ್ತೊಬ್ಬ ಅಭ್ಯರ್ಥಿ ದಲಿತ ಸಮುದಾಯದವರಾಗಿರುತ್ತಾರೆ ಎಂದು ಪಕ್ಷದ ಅಧ್ಯಕ್ಷೆ ತಿಳಿಸಿದ್ದಾರೆ.

ಅಲ್ಲದೆ ಉತ್ತರ ಪ್ರದೇಶದ ವಿಧಾನ ಪರಿಷತ್ತಿಗೂ ಮೂವರು ಸದಸ್ಯರನ್ನು ಬಿ ಎಸ್ ಪಿ ನೇಮಿಸಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT