ಉಮನ್ ಚಾಂಡಿ 
ಪ್ರಧಾನ ಸುದ್ದಿ

ಈ ದಯನೀಯ ಸೋಲನ್ನು ನಿರೀಕ್ಷಿಸಿರಲಿಲ್ಲ: ಚಾಂಡಿ

ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಸೋಲುಂಡು ಅಧಿಕಾರದಿಂದ ಹೊರನಡೆಯಲಿರುವ ಕಾಂಗ್ರೆಸ್ ನೇತೃತ್ವದ ಯು ಡಿ ಎಫ್ ಮುಖ್ಯಮಂತ್ರಿ ಉಮನ್ ಚಾಂಡಿ, ಇಂತಹ ಸೋಲನ್ನು ನಿರೀಕ್ಷಿಸಿರಲಿಲ್ಲ

ಕೊಟ್ಟಾಯಂ: ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಸೋಲುಂಡು ಅಧಿಕಾರದಿಂದ ಹೊರನಡೆಯಲಿರುವ ಕಾಂಗ್ರೆಸ್ ನೇತೃತ್ವದ ಯು ಡಿ ಎಫ್ ಮುಖ್ಯಮಂತ್ರಿ ಉಮನ್ ಚಾಂಡಿ, ಇಂತಹ ಸೋಲನ್ನು ನಿರೀಕ್ಷಿಸಿರಲಿಲ್ಲ ಎಂದು ಗುರುವಾರ ಹೇಳಿದ್ದಾರೆ.

"ಪ್ರಜಾಪ್ರಭುತ್ವದಲ್ಲಿ ಜನರ ಆಯ್ಕೆಯೇ ಅಂತಿಮ. ನಿರೀಕ್ಷಿಸಿಲ್ಲದಿದ್ದರೂ ಈ ಸೋಲನ್ನು ಒಪ್ಪಿಕೊಳ್ಳುತ್ತೇವೆ" ಎಂದು ಪುತುಪಲ್ಲಿನ ಅವರ ಮನೆಯಲ್ಲಿ ಸೋಲಿನಿಂದ ಅಚ್ಚರಿಗೊಂಡಿದ್ದ ಚಾಂಡಿ ಹೇಳಿದ್ದಾರೆ.

"ನಾವು ಅಧಿಕಾರಕ್ಕೆ ಬರುವ ಭರವಸೆಯಲಿದ್ದೆವು ಆದರೆ ಹೀಗಾಗಿದೆ. ಈಗ ಕುಳಿತು ಆತ್ಮಾವಲೋಕನ ಮಾಡಿಕೊಳ್ಳಲಿದ್ದೇವೆ" ಎಂದು ಹೇಳಿದ್ದಾರೆ

ವಿಸರ್ಜನೆಯಾಗಲಿರುವ ವಿಧಾನಸಭೆಯಲ್ಲಿ ೩೯ ಕ್ಷೇತ್ರಗಳನ್ನು ಗೆದ್ದಿದ್ದ ಕಾಂಗ್ರೆಸ್ ಈಗ ಕೇವಲ ೨೩ ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸುವ ಸಾಧ್ಯತೆಯಿದ್ದು, ಯುಡಿಎಫ್ ಒಟ್ಟಾರೆ ೧೪೦ ಕ್ಷೇತ್ರಗಲ್ಲಿ ೪೬ ಕಡೆ ಮುಂಚೂಣಿಯಲ್ಲಿದೆ.

ಸಿ ಪಿ ಐ- ಎಂ ನೇತೃತ್ವದ ಎಲ್ ಡಿ ಎಫ್ ೯೨ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಲಕ್ಷಣಗಳಿದ್ದು, ಬಿಜೆಪಿ ಒಂದು ಸ್ಥಾನ ಪಡೆದು ಕೇರಳದಲ್ಲಿ ಖಾತೆ ತೆರೆದಿದೆ.

"ಯುಡಿಎಫ್ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ಹೊರುತ್ತೇನೆ" ಎಂದಿದ್ದಾರೆ ಚಾಂಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT