ಪ್ರಧಾನ ಸುದ್ದಿ

ಮೇ 25ಕ್ಕೆ ಪಿಯು ಫಲಿತಾಂಶ ಪ್ರಕಟ: ಕಿಮ್ಮನೆ ರತ್ನಾಕರ

Lingaraj Badiger
ಬೆಂಗಳೂರು: ಮೇ 25ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪಿಯು ಉಪನ್ಯಾಸಕರ ಮೌಲ್ಯಮಾಪನ ಬಹಿಷ್ಕಾರ ಪಿಯು ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಆದರೆ ಆತಂಕಕ್ಕೆ ತೆರೆ ಎಳೆದಿರುವ ಶಿಕ್ಷಣ ಸಚಿವರು ಮೇ 25ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ,
ಭದ್ರಾವತಿಯಲ್ಲಿ ಎಸ್ಎಸ್ಎಲ್ ಸಿಯಲ್ಲಿ 625ಕ್ಕೆ 625 ಅಂಕ ಪಡೆದ ರಂಜನ್ನನ್ನು ಸನ್ಮಾನಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 25ರಂದು ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ ಮಂಡಳಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದರು.
ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಮೊದಲೆ ಅಂದರೆ ಮೇ ೧೮ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ೧೮ ದಿನಗಳ ಕಾಲ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದರಿಂದ ಒಂದು ವಾರ ವಿಳಂಬವಾಗಿದೆ.
SCROLL FOR NEXT