ಕೇರಳದ ೨೨ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಪಿಣರಾಯಿ ವಿಜಯನ್ 
ಪ್ರಧಾನ ಸುದ್ದಿ

ಮೇ 25ರಂದು ಪಿಣರಾಯಿ ವಿಜಯನ್ ಪ್ರಮಾಣ

ಮೇ ೨೫ ರಂದು ಕೇರಳದ ರಾಜಧಾನಿಯಲ್ಲಿ ಪಿಣರಾಯಿ ವಿಜಯನ್ ಅವರು ರಾಜ್ಯದ ೨೨ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತಿರುವನಂತಪುರಮ್: ಮೇ ೨೫ ರಂದು ಕೇರಳದ ರಾಜಧಾನಿಯಲ್ಲಿ ಪಿಣರಾಯಿ ವಿಜಯನ್ ಅವರು ರಾಜ್ಯದ ೨೨ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಪಿಐ-ಎಂ ಮುಂದಾಳತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ ಡಿ ಎಫ್) ಕೇರಳ ವಿಧಾನಸಭೆಯ ೧೪೦ ಸಂಖ್ಯೆಯ ಬಲಾಬಲದಲ್ಲಿ ೯೧ ಸ್ಥಾನಗಳನ್ನು ಗುರುವಾರ ಗೆದ್ದಿತ್ತು.

ತಮ್ಮ ಸಹದ್ಯೋಗಿ ವಿ ಎಸ್ ಅಚ್ಯುತಾನಂದ್ ಮತ್ತು ಸಿಪಿಐ-ಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರನ್ನು ವಿಜಯನ್ ಭೇಟಿ ಮಾಡಿದ ಮೇಲೆ ಪ್ರಮಾಣವಚನ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

"ಅವರು (ಅಚ್ಯುತಾನಂದ್) ಅವರು ನಮ್ಮ ಪಕ್ಷದಿಂದ ಈ ಹಿಂದೆ ಮುಖ್ಯಮಂತ್ರಿಯಾಗಿದ್ದವರು. ಆದುದರಿಂದ ನಮ್ಮನ್ನು ಭೇಟಿ ಮಾಡಿದರು. ಸದ್ಯಕ್ಕೆ ನಿಗದಿಯಾಗಿರುವಂತೆ ಸೆಂಟ್ರಲ್ ಸ್ಟೇಡಿಯಂ ನಲ್ಲಿ ಬುಧವಾರ (ಮೇ ೨೫) ಹೊಸ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ" ಎಂದು ವಿಜಯನ್ ಹೇಳಿದ್ದಾರೆ.

"ಸಂಪುಟ ರಚನೆಯ ಬಗ್ಗೆ ಚರ್ಚೆಗಳು ಜಾರಿಯಲ್ಲಿವೆ ಮತ್ತು ಮುಂದಿನ ದಿನಗಳಲ್ಲಿ ಈ ಪಟ್ಟಿ ಸಿದ್ಧವಾಗಲಿದೆ" ಎಂದು ಕೂಡ ಅವರು ಹೇಳಿದ್ದಾರೆ.

ಶುಕ್ರವಾರ ನಡೆದ ಪಕ್ಷದ ಸಭೆಯಲ್ಲಿ ವಿಜಯನ್ ಅವರನ್ನು ಮುಖಂಡರನ್ನಾಗಿ ಆಯ್ಕೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT