ಕೇರಳದ ೨೨ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಪಿಣರಾಯಿ ವಿಜಯನ್ 
ಪ್ರಧಾನ ಸುದ್ದಿ

ಮೇ 25ರಂದು ಪಿಣರಾಯಿ ವಿಜಯನ್ ಪ್ರಮಾಣ

ಮೇ ೨೫ ರಂದು ಕೇರಳದ ರಾಜಧಾನಿಯಲ್ಲಿ ಪಿಣರಾಯಿ ವಿಜಯನ್ ಅವರು ರಾಜ್ಯದ ೨೨ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತಿರುವನಂತಪುರಮ್: ಮೇ ೨೫ ರಂದು ಕೇರಳದ ರಾಜಧಾನಿಯಲ್ಲಿ ಪಿಣರಾಯಿ ವಿಜಯನ್ ಅವರು ರಾಜ್ಯದ ೨೨ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಪಿಐ-ಎಂ ಮುಂದಾಳತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ ಡಿ ಎಫ್) ಕೇರಳ ವಿಧಾನಸಭೆಯ ೧೪೦ ಸಂಖ್ಯೆಯ ಬಲಾಬಲದಲ್ಲಿ ೯೧ ಸ್ಥಾನಗಳನ್ನು ಗುರುವಾರ ಗೆದ್ದಿತ್ತು.

ತಮ್ಮ ಸಹದ್ಯೋಗಿ ವಿ ಎಸ್ ಅಚ್ಯುತಾನಂದ್ ಮತ್ತು ಸಿಪಿಐ-ಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರನ್ನು ವಿಜಯನ್ ಭೇಟಿ ಮಾಡಿದ ಮೇಲೆ ಪ್ರಮಾಣವಚನ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

"ಅವರು (ಅಚ್ಯುತಾನಂದ್) ಅವರು ನಮ್ಮ ಪಕ್ಷದಿಂದ ಈ ಹಿಂದೆ ಮುಖ್ಯಮಂತ್ರಿಯಾಗಿದ್ದವರು. ಆದುದರಿಂದ ನಮ್ಮನ್ನು ಭೇಟಿ ಮಾಡಿದರು. ಸದ್ಯಕ್ಕೆ ನಿಗದಿಯಾಗಿರುವಂತೆ ಸೆಂಟ್ರಲ್ ಸ್ಟೇಡಿಯಂ ನಲ್ಲಿ ಬುಧವಾರ (ಮೇ ೨೫) ಹೊಸ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ" ಎಂದು ವಿಜಯನ್ ಹೇಳಿದ್ದಾರೆ.

"ಸಂಪುಟ ರಚನೆಯ ಬಗ್ಗೆ ಚರ್ಚೆಗಳು ಜಾರಿಯಲ್ಲಿವೆ ಮತ್ತು ಮುಂದಿನ ದಿನಗಳಲ್ಲಿ ಈ ಪಟ್ಟಿ ಸಿದ್ಧವಾಗಲಿದೆ" ಎಂದು ಕೂಡ ಅವರು ಹೇಳಿದ್ದಾರೆ.

ಶುಕ್ರವಾರ ನಡೆದ ಪಕ್ಷದ ಸಭೆಯಲ್ಲಿ ವಿಜಯನ್ ಅವರನ್ನು ಮುಖಂಡರನ್ನಾಗಿ ಆಯ್ಕೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!