ಜವಹರ್ ಲಾಲ್ ನೆಹರು 
ಪ್ರಧಾನ ಸುದ್ದಿ

ಫೇಸ್ ಬುಕ್ ನಲ್ಲಿ ನೆಹರು ಹೊಗಳಿಕೆ, ವೈರಲ್ ಆಯ್ತು ಪೋಸ್ಟ್: ಐಎಎಸ್ ಅಧಿಕಾರಿ ಎತ್ತಂಗಡಿ

ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ...

ಮಧ್ಯಪ್ರದೇಶ: ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ಗೊಂಡಿರುವ ಘಟನೆ ನಡೆದಿದೆ.

ಅಜಯ್ ಸಿಂಗ್ ಗ್ಯಾಂಗ್ ವಾರ್ ಫೇಸ್ ಬುಕ್ ನಲ್ಲಿ ಹಾಕಿದ ಪೋಸ್ಟ್ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆಗಳಿಸಲಾಗಿದೆ. ನಂತರ ಹಿಂದಿಯಲ್ಲಿ ಹಾಕಿದ್ದ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜವಹರ್ ಲಾಲ್ ನೆಹರು ಅವರು ಮಾಡಿದ್ದ ತಪ್ಪಾದರೂ ಏನು, ಹಿಂದೂ ತಾಲಿಬಾನ್ ರಾಷ್ಟ್ರದಿಂದ ನಮ್ಮನ್ನು ರಕ್ಷಿಸಿದ್ದು ತಪ್ಪಾಯಿತೇ?  ಐಐಟಿ, ಇಸ್ರೋ, ಬಿಎಆರ್ ಸಿ, ಬಿಎಚ್ ಇಎಲ್, ಸೇರಿದಂತೆ ಹಲವು ಸ್ಟೀಲ್ ಫ್ಲಾಂಟ್ ಗಳ, ಜಲಾಶಯಗಳು, ಶಕ್ತಿ ಉತ್ಪನ್ನ ಕೇಂದ್ರಗಳನ್ನು ಸ್ಥಾಪಿಸಿದ್ದು ಅವರ ತಪ್ಪೇ ಎಂದು ಪ್ರಶ್ನಿಸಿದ್ದಾರೆ.

ಹೀಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸ್ಟೇಟಸ್ ಅನ್ನು ಸಾವಿರಾರು ಮಂದಿ ಶೇರ್ ಮಾಡಿದ್ದರು. ಸೇವಾ ನಿಯಮ ಉಲ್ಲಂಘನೆ ಆರೋಪದ ಮೇಲೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಆಗಸ್ಟ್ ನಲ್ಲಿ ಗಾಂಗ್ವಾರ್ ಬದ್ವಾನಿ ಗೆ ನಿಯುಕ್ತಿಗೊಂಡಿದ್ದರು. ಏಕಾಏಕಿ ವರ್ಗಾವಣೆ ಮಾಡಿರುವ ಸರ್ಕಾರ ಯಾವುದೇ ವಿವರಣೆ ನೀಡಿಲ್ಲ.

ಇದನ್ನು ವಿರೋಧಿಸಿರುವ ಕಾಂಗ್ರೆಸ್, ಶಿವರಾಜ್ ಸಿಂಗ್ ಚೌಹಾನ್ ಸರ್ಕಾರದ ಅಸಹಿಷ್ಣುತೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಕೇಸು ದಾಖಲು-Video

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

SCROLL FOR NEXT