ಜವಹರ್ ಲಾಲ್ ನೆಹರು 
ಪ್ರಧಾನ ಸುದ್ದಿ

ಫೇಸ್ ಬುಕ್ ನಲ್ಲಿ ನೆಹರು ಹೊಗಳಿಕೆ, ವೈರಲ್ ಆಯ್ತು ಪೋಸ್ಟ್: ಐಎಎಸ್ ಅಧಿಕಾರಿ ಎತ್ತಂಗಡಿ

ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ...

ಮಧ್ಯಪ್ರದೇಶ: ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ಗೊಂಡಿರುವ ಘಟನೆ ನಡೆದಿದೆ.

ಅಜಯ್ ಸಿಂಗ್ ಗ್ಯಾಂಗ್ ವಾರ್ ಫೇಸ್ ಬುಕ್ ನಲ್ಲಿ ಹಾಕಿದ ಪೋಸ್ಟ್ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆಗಳಿಸಲಾಗಿದೆ. ನಂತರ ಹಿಂದಿಯಲ್ಲಿ ಹಾಕಿದ್ದ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜವಹರ್ ಲಾಲ್ ನೆಹರು ಅವರು ಮಾಡಿದ್ದ ತಪ್ಪಾದರೂ ಏನು, ಹಿಂದೂ ತಾಲಿಬಾನ್ ರಾಷ್ಟ್ರದಿಂದ ನಮ್ಮನ್ನು ರಕ್ಷಿಸಿದ್ದು ತಪ್ಪಾಯಿತೇ?  ಐಐಟಿ, ಇಸ್ರೋ, ಬಿಎಆರ್ ಸಿ, ಬಿಎಚ್ ಇಎಲ್, ಸೇರಿದಂತೆ ಹಲವು ಸ್ಟೀಲ್ ಫ್ಲಾಂಟ್ ಗಳ, ಜಲಾಶಯಗಳು, ಶಕ್ತಿ ಉತ್ಪನ್ನ ಕೇಂದ್ರಗಳನ್ನು ಸ್ಥಾಪಿಸಿದ್ದು ಅವರ ತಪ್ಪೇ ಎಂದು ಪ್ರಶ್ನಿಸಿದ್ದಾರೆ.

ಹೀಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸ್ಟೇಟಸ್ ಅನ್ನು ಸಾವಿರಾರು ಮಂದಿ ಶೇರ್ ಮಾಡಿದ್ದರು. ಸೇವಾ ನಿಯಮ ಉಲ್ಲಂಘನೆ ಆರೋಪದ ಮೇಲೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಆಗಸ್ಟ್ ನಲ್ಲಿ ಗಾಂಗ್ವಾರ್ ಬದ್ವಾನಿ ಗೆ ನಿಯುಕ್ತಿಗೊಂಡಿದ್ದರು. ಏಕಾಏಕಿ ವರ್ಗಾವಣೆ ಮಾಡಿರುವ ಸರ್ಕಾರ ಯಾವುದೇ ವಿವರಣೆ ನೀಡಿಲ್ಲ.

ಇದನ್ನು ವಿರೋಧಿಸಿರುವ ಕಾಂಗ್ರೆಸ್, ಶಿವರಾಜ್ ಸಿಂಗ್ ಚೌಹಾನ್ ಸರ್ಕಾರದ ಅಸಹಿಷ್ಣುತೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

SCROLL FOR NEXT