ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ವ್ಯಂಗ್ಯ ಮಾಡಿದ ಆರೋಪದ ಮೇಲೆ ನಟ ತನ್ಮಯ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮುಂಬೈ ವಿಶೇಷ ಬ್ರಾಂಚ್ ನ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
ಸಚಿನ್ ಹಾಗೂ ಲತಾ ಅಂತರ್ಯುದ್ಧ ಎಂಬ ಶಿರ್ಷಿಕೆ ಅಡಿಯಲ್ಲಿ ಕೀಳು ಮಟ್ಟದ ಹಾಸ್ಯ ನಿರ್ಮಿಸಿದ ಎಐಬಿ ಹಾಸ್ಯ ಸಂಸ್ಥೆ ಮುಖ್ಯಸ್ಥ ತನ್ಮಯ್ ಭಟ್ ವಿರುದ್ಧ ಎಂಎನ್ಎಸ್ ಕೇಸ್ ದಾಖಲಿಸಿದೆ.
ಎಐಬಿ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ಮುಂಬೈ ವಿಶೇಷ ಬ್ರಾಂಚ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಡಿಸಿಪಿ ಹಾಗೂ ಮುಂಬೈ ಪೊಲೀಸ್ ಪಿಆರ್ ಒ ಸಂಗ್ರಾಮ್ ಸಿಂಗ್ ನಿಶಾಂದರ್ ಅವರು ತಿಳಿಸಿದ್ದಾರೆ.
ತನ್ಮಯ್ ಭಟ್ ಅವರ ಈ ಹಾಸ್ಯ ಕಿರುಚಿತ್ರದ ಕುರಿತು ಬಾಲಿವುಡ್ ನಟರಾದ ಅನುಪಮ್ ಖೇರ್ ಹಾಗೂ ರಿತೇಶ್ ದೇಶ್ಮುಖ್ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ. ನನಗೆ 9 ಬಾರಿ ಉತ್ತಮ ಹಾಸ್ಯ ನಟ ಎಂಬ ಪ್ರಶಸ್ತಿ ಲಭಿಸಿದೆ. ಅಷ್ಟೇ ಅಲ್ಲ ನನಗೆ ಉತ್ತಮ ಹಾಸ್ಯ ಪ್ರಜ್ಞೆ ಕೂಡ ಇದೆ. ಆದರೆ ಇಂತಹ ಕೀಳು ಮಟ್ಟದ ಹಾಸ್ಯವನ್ನು ನಿರೀಕ್ಷಿಸಿರಲಿಲ್ಲ ಎಂದು ಹಿರಿಯ ನಟ ಅನುಪಮ್ ಖೇರ್ ತಿಳಿಸಿದ್ದಾರೆ.
ಮಹಾನ್ ಸಾಧಕರ ವಿಚಾರವಾಗಿ ನಿರ್ಮಿಸಿರುವ ಹಾಸ್ಯದಿಂದ ನನಗೆ ಆಘಾತವಾಗಿದೆ. ಇದು ಹಾಸ್ಯವಲ್ಲ ಅಗೌರವ ಎಂದು ರಿತೇಶ್ ದೇಶ್ಮುಖ್ ಹೇಳಿದ್ದಾರೆ.
ಸಚಿನ್ ಹಾಗೂ ಲತಾ ಅಂತರ್ಯುದ್ಧ ಎಂಬ ಶಿರ್ಷಿಕೆ ಅಡಿಯಲ್ಲಿ ಕೀಳು ಮಟ್ಟದ ಹಾಸ್ಯ ನಿರ್ಮಿಸಿದ ತನ್ಮಯ್, ಮುಂದುವರೆದು ಸಚಿನ್ ಹಾಗೂ ವಿರಾಟ್ ಇವರಲ್ಲಿ ಯಾರು ಬೆಸ್ಟ್ ಎಂಬ ಪ್ರಶ್ನೆ ಹಾಕಿದ್ದರು. ಈ ವಿಡೀಯೋ ತುಣುಕನ್ನು ಮೇ 26ರಂದು ಫೇಸ್ಬುಕ್ಗೆ ಅಪ್ಲೋಡ್ ಮಾಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos