ತನ್ಮಯ್ ಭಟ್ 
ಪ್ರಧಾನ ಸುದ್ದಿ

ತನ್ಮಯ್ ಭಟ್ ವಿರುದ್ಧ ದೂರು: ಮುಂಬೈ ವಿಶೇಷ ಬ್ರಾಂಚ್ ನಿಂದ ವಿಚಾರಣೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ವ್ಯಂಗ್ಯ ಮಾಡಿದ ಆರೋಪದ ಮೇಲೆ ನಟ ತನ್ಮಯ್ ಭಟ್ ವಿರುದ್ಧ ...

ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ವ್ಯಂಗ್ಯ ಮಾಡಿದ ಆರೋಪದ ಮೇಲೆ ನಟ ತನ್ಮಯ್ ಭಟ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಮುಂಬೈ ವಿಶೇಷ ಬ್ರಾಂಚ್ ನ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
ಸಚಿನ್ ಹಾಗೂ ಲತಾ ಅಂತರ್ಯುದ್ಧ ಎಂಬ ಶಿರ್ಷಿಕೆ ಅಡಿಯಲ್ಲಿ ಕೀಳು ಮಟ್ಟದ ಹಾಸ್ಯ ನಿರ್ಮಿಸಿದ ಎಐಬಿ ಹಾಸ್ಯ ಸಂಸ್ಥೆ ಮುಖ್ಯಸ್ಥ ತನ್ಮಯ್ ಭಟ್ ವಿರುದ್ಧ ಎಂಎನ್ಎಸ್ ಕೇಸ್ ದಾಖಲಿಸಿದೆ.
ಎಐಬಿ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ಮುಂಬೈ ವಿಶೇಷ ಬ್ರಾಂಚ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಡಿಸಿಪಿ ಹಾಗೂ ಮುಂಬೈ ಪೊಲೀಸ್ ಪಿಆರ್ ಒ ಸಂಗ್ರಾಮ್ ಸಿಂಗ್ ನಿಶಾಂದರ್ ಅವರು ತಿಳಿಸಿದ್ದಾರೆ.
ತನ್ಮಯ್ ಭಟ್ ಅವರ ಈ ಹಾಸ್ಯ ಕಿರುಚಿತ್ರದ ಕುರಿತು ಬಾಲಿವುಡ್ ನಟರಾದ ಅನುಪಮ್ ಖೇರ್ ಹಾಗೂ ರಿತೇಶ್ ದೇಶ್ಮುಖ್ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ. ನನಗೆ 9 ಬಾರಿ ಉತ್ತಮ ಹಾಸ್ಯ ನಟ ಎಂಬ ಪ್ರಶಸ್ತಿ ಲಭಿಸಿದೆ. ಅಷ್ಟೇ ಅಲ್ಲ ನನಗೆ ಉತ್ತಮ ಹಾಸ್ಯ ಪ್ರಜ್ಞೆ ಕೂಡ ಇದೆ. ಆದರೆ ಇಂತಹ ಕೀಳು ಮಟ್ಟದ ಹಾಸ್ಯವನ್ನು ನಿರೀಕ್ಷಿಸಿರಲಿಲ್ಲ ಎಂದು ಹಿರಿಯ ನಟ ಅನುಪಮ್ ಖೇರ್ ತಿಳಿಸಿದ್ದಾರೆ.
ಮಹಾನ್ ಸಾಧಕರ ವಿಚಾರವಾಗಿ ನಿರ್ಮಿಸಿರುವ ಹಾಸ್ಯದಿಂದ ನನಗೆ ಆಘಾತವಾಗಿದೆ. ಇದು ಹಾಸ್ಯವಲ್ಲ ಅಗೌರವ ಎಂದು ರಿತೇಶ್ ದೇಶ್ಮುಖ್  ಹೇಳಿದ್ದಾರೆ.
ಸಚಿನ್ ಹಾಗೂ ಲತಾ ಅಂತರ್ಯುದ್ಧ ಎಂಬ ಶಿರ್ಷಿಕೆ ಅಡಿಯಲ್ಲಿ ಕೀಳು ಮಟ್ಟದ ಹಾಸ್ಯ ನಿರ್ಮಿಸಿದ ತನ್ಮಯ್, ಮುಂದುವರೆದು ಸಚಿನ್ ಹಾಗೂ ವಿರಾಟ್ ಇವರಲ್ಲಿ ಯಾರು ಬೆಸ್ಟ್ ಎಂಬ ಪ್ರಶ್ನೆ ಹಾಕಿದ್ದರು. ಈ ವಿಡೀಯೋ ತುಣುಕನ್ನು ಮೇ 26ರಂದು ಫೇಸ್​ಬುಕ್​ಗೆ ಅಪ್​ಲೋಡ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT