ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ನಿಗಮ, ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಿ ಸಿಎಂ ಆದೇಶ

ರಾಜ್ಯ ಸರ್ಕಾರದ ಒಡೆತನದಲ್ಲಿರುವ 91 ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ....

ಬೆಂಗಳೂರು: ರಾಜ್ಯ ಸರ್ಕಾರದ ಒಡೆತನದಲ್ಲಿರುವ 91 ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ,
ಒಟ್ಟು 91 ನಿಗಮ, ಮಂಡಳಿಗಳ ಪೈಕಿ 21ಕ್ಕೆ ಶಾಸಕರನ್ನು ಹಾಗೂ ಇತರೆ 70 ನಿಗಮ, ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ.
ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರಿಗೂ ನಿಗಮ ಮಂಡಳಿ ನೇಮಕಾತಿಯಲ್ಲಿ ಸಿಎಂ ಸ್ಥಾನ ನೀಡಿದ್ದು, ಕರ್ನಾಕಟ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.
ಮೈಸೂರಿನ ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧ್ಯಕ್ಷರನ್ನಾಗಿ, ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾಗಿ ಅಫ್ಜಲಪುರ ಶಾಸಕ ಮಾಲೀಕಯ್ಯ ಗುತ್ತೆದಾರ್, ಆಹಾರ ನಿಗಮದ ಅಧ್ಯಕ್ಷರಾಗಿ ಎಂಟಿಬಿ ನಾಗರಾಜ್ , ಸ್ಲಮ್ ಬೋರ್ಡ್ ಅಧ್ಯಕ್ಷರಾಗಿ ಆರ್ ವಿ ದೇವರಾಜ್, ಭೂಸೇನಾ ನಿಗಮ ನಿಯಮಿತದ ಅಧ್ಯಕ್ಷರಾಗಿ ರಾಜಶೇಖರ್, ರಾಜ್ಯ ವಿದ್ಯುನ್ಮಾನ ನಿಗಮದ ಅಧ್ಯಕ್ಷರಾಗಿ ಡಿ ಸುಧಾಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶಾರದಾ ಮೋಹನ್ ಶೆಟ್ಟಿ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಂಪಯ್ಯ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಸಂತ ಬಂಗೇರ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರಾಗಿ ಶಾಸಕ ಬಿಆರ್ ಯಾವಗಲ್ ಅವರು ನೇಮಕಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT