ಮೃತ ನಟ ಉದಯ್ 
ಪ್ರಧಾನ ಸುದ್ದಿ

'ಮಾಸ್ತಿ ಗುಡಿ' ದುರಂತ, ನಟ ಉದಯ್ ಶವ ಪತ್ತೆ, ಅನಿಲ್ ದೇಹಕ್ಕಾಗಿ ಮುಂದುವರೆದ ಕಾರ್ಯಾಚರಣೆ

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರವಾಗಿದ್ದ ಇಬ್ಬರು...

ಬೆಂಗಳೂರು: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರವಾಗಿದ್ದ ಇಬ್ಬರು ಖಳನಟರ ಪೈಕಿ ಬುಧವಾರ ಓರ್ವ ನಟ ರಾಘವ್ ಉದಯ್ ಅವರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ನಟ ಅನಿಲ್ ದೇಹಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ.
ಕಳೆದ ಸೋಮವಾರ ಮಧ್ಯಾಹ್ನ ನೀರುಪಾಲಾಗಿದ್ದ ಉದಯ್ ಅವರ ಶವ ಇಂದು ಪತ್ತೆಯಾಗಿದ್ದು, ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆಗೆ ಸಿದ್ಧಪಡಿಸಲಾಗುತ್ತಿದೆ. ಇನ್ನು ಮರಣೋತ್ತರ ಪರೀಕ್ಷೆಯ ನಂತರ ಉದಯ್ ಮನೆಗೆ ಶವ ಸಾಗಿಸಲಾಗುವುದು. ಮುಂದಿನ ವಿಧಿವಿಧಾನಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದಿರುವ ದುನಿಯಾ ವಿಜಯ್ ಅವರು ಮತ್ತೊಬ್ಬ ನಟ ಅನಿಲ್ ಶವ ಸಿಗುವವರೆಗೂ ಟೆನ್ಷನ್ ಇದ್ದೆ ಇರುತ್ತೆ ಎಂದು ಹೇಳಿದ್ದಾರೆ.
ಹೆಲಿಕಾಪ್ಟರ್ ನಿಂದ ನೀರಿಗೆ ಜಿಗಿದಿದ್ದ ಸ್ಥಳದಿಂದ 20 ಮೀಟರ್ ದೂರದಲ್ಲಿ ಉದಯ್ ಅವರ ಶವ ತೇಲಿಬಂದಿದ್ದು, ಅದನ್ನು ರಕ್ಷಣಾ ಸಿಬ್ಬಂದಿ ದಡಕ್ಕೆ ತೆಗೆದುಕೊಂಡಿದ್ದಾರೆ.
ಕಳೆದ ಮೂರು ದಿನಗಳಿಂದ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮುಳುಗು ತಜ್ಞರು, ಅಗ್ನಿಶಾಮಕ ಪಡೆ, ಎನ್ ಡಿಆರ್ ಎಫ್ ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT