ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ 
ಪ್ರಧಾನ ಸುದ್ದಿ

ಭಾರತದಲ್ಲಿ ಖೋಟಾ ನೋಟು ಚಲಾವಣೆಗೆ ಚಿದಂಬರಂ ದೂಷಿಸಿದ ಸುಬ್ರಮಣ್ಯ ಸ್ವಾಮಿ

ಭಾರತದ ನೋಟುಗಳ ಮುದ್ರಣವನ್ನು, ಪಾಕಿಸ್ತಾನದ ನೋಟುಗಳನ್ನು ಕೂಡ ಮುದ್ರಿಸುವ ಬ್ರಿಟಿಷ್ ಸಂಸ್ಥೆಯೊಂದಕ್ಕೆ ಒಪ್ಪಂದ ನೀಡಿದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಬೇಜವಾಬ್ದಾರಿತನವೇ,

ನವದೆಹಲಿ: ಭಾರತದ ನೋಟುಗಳ ಮುದ್ರಣವನ್ನು, ಪಾಕಿಸ್ತಾನದ ನೋಟುಗಳನ್ನು ಕೂಡ ಮುದ್ರಿಸುವ ಬ್ರಿಟಿಷ್ ಸಂಸ್ಥೆಯೊಂದಕ್ಕೆ ಒಪ್ಪಂದ ನೀಡಿದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಬೇಜವಾಬ್ದಾರಿತನವೇ, ದೇಶದಲ್ಲಿ ಖೋಟಾ ನೋಟಿನ ಚಲಾವಣೆ ಹೆಚ್ಚಿದ್ದಕ್ಕೆ ಕಾರಣ ಎಂದು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಹೇಳಿದ್ದಾರೆ.
ರಾಷ್ಟ್ರೀಯ ಭದ್ರತೆಯನ್ನು ಕಾಪಾಡಿ, ಭಯೋತ್ಪಾದನೆಗೆ ದೊಡ್ಡ ಪೆಟ್ಟು ನೀಡುವಲ್ಲಿ ನರೇಂದ್ರ ಮೋದಿ ಸರ್ಕಾರ 1000 ಮತ್ತು 500 ರೂ ಮೌಲ್ಯದ ನೋಟುಗಳನ್ನು ಹಿಂದಕ್ಕೆ ಪಡೆಯುತ್ತಿರುವ ಕ್ರಮ ದೊಡ್ಡ ರೀತಿಯಲ್ಲಿ ಸಹಕರಿಸಲಿದೆ ಎಂದು ಸುಬ್ರಮಣ್ಯಸ್ವಾಮಿ ಹೇಳಿದ್ದಾರೆ. 
"ನಾನು ನರೇಂದ್ರ ಮೋದಿ ಅವರ ಈ ಕ್ರಮವನ್ನು ಸ್ವಾಗತಿಸುತ್ತೇನೆ. ರಾಷ್ಟ್ರೀಯ ಭದ್ರತೆಗೆ ಇದು ಬಹಳ ಅವಶ್ಯಕವಾಗಿತ್ತು. ಕಪ್ಪು ಹಣವನ್ನು ಕೊನೆಗಾಣಿಸಲು ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ಸ್ವಾಮಿ ಹೇಳಿದ್ದಾರೆ. 
"ಆದರೆ ಭಯೋತ್ಪಾದನೆಯ ವಿರುದ್ಧ ಹೋರಾಟಕ್ಕೆ ಇದು ಮಾರಣಾಂತಿಕ ಹೊಡೆತ ಏಕೆಂದರೆ ಭಯೋತ್ಪಾದನೆಯ ಸಂಪೂರ್ಣ ಪ್ರಾಯೋಜತ್ವ ನಡೆಯುವುದು ಖೋಟಾ ನೋಟುಗಳಿಂದ" ಎಂದು ಸ್ವಾಮಿ ಹೇಳಿದ್ದಾರೆ. 
"ಇದೆಲ್ಲ ಪ್ರಾರಂಭವಾಗಿದ್ದು ಚಿದಂಬರಂ ವಿತ್ತ ಸಚಿವರಾಗಿದ್ದಾಗ. ಬ್ರಿಟಿಷ್ ಸಂಸ್ಥೆ ಲಂಡನ್ನಿನ ಡೇ ಲ ರಿಯೂಗೆ ಅವರು ನೋಟುಗಳನ್ನು ಮುದ್ರಿಸುವ ಒಪ್ಪಂದ ನೀಡಿದ್ದರು. ಈ ಸಂಸ್ಥೆ ಪಾಕಿಸ್ತಾನದ ನೋಟುಗಳನ್ನು ಕೂಡ ಮುದ್ರಿಸುತ್ತದೆ. ಕಾಶ್ಮೀರದ ಗಲಭೆಯೆಲ್ಲಾ ಪಾಕಿಸ್ತಾನದಿಂದ ಬರುವ ಖೋಟಾ ನೋಟುಗಳಿಂದ ಪ್ರಾಯೋಜತ್ವ ಪಡೆಯುತ್ತದೆ" ಎಂದು ಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT