ಬ್ಯಾಂಕ್ ನಲ್ಲಿ ಜನಸ್ತೋಮ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಚಿಂತೆ ಬೇಡ..ರಾತ್ರಿ 9ರವರೆಗೂ ಬ್ಯಾಂಕ್ ಕಾರ್ಯ ನಿರ್ವಹಣೆ!

500 ಮತ್ತು 1000 ನೋಟುಗಳ ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಕೆಲ ಬ್ಯಾಂಕ್ ಗಳು ಮುಂದೆ ಬಂದಿದ್ದು, ರಾತ್ರಿ 9ರವೆರಗೂ ಕಾರ್ಯ ನಿರ್ವಹಿಸಲು ತಾವು ಸಿದ್ಧ ಎಂದು ಹೇಳಿವೆ.

ನವದೆಹಲಿ: 500 ಮತ್ತು 1000 ನೋಟುಗಳ ನಿಷೇಧದ ಬಳಿಕ ದೇಶದಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಕೆಲ ಬ್ಯಾಂಕ್ ಗಳು ಮುಂದೆ ಬಂದಿದ್ದು, ರಾತ್ರಿ 9ರವೆರಗೂ ಕಾರ್ಯ ನಿರ್ವಹಿಸಲು ತಾವು ಸಿದ್ಧ ಎಂದು ಹೇಳಿವೆ.

ನೋಟುಗಳ ನಿಷೇಧದ ಬಳಿಕ ನಿನ್ನೆಯಿಂದ ಬ್ಯಾಂಕ್ ಗಳು ಕಾರ್ಯಾರಂಭ ಮಾಡಿದ್ದು, ಭಾರಿ ಪ್ರಮಾಣದಲ್ಲಿ ನೋಟು ಬದಲಾವಣೆ ಜನ ಮುಗಿಬಿದಿದ್ದಾರೆ. ಈ ಹಿನ್ನಲೆಯಲ್ಲಿ ಜನರ ಸಂಕಷ್ಚವನ್ನು ಅರಿತಿರುವ ಕೆಲ ಬ್ಯಾಂಕ್ ಸಂಸ್ಥೆಗಳು  ರಾತ್ರಿ 9ರವರೆಗೂ ಕಾರ್ಯ ನಿರ್ವಹಿಸಲು ಮುಂದೆ ಬಂದಿವೆ ಎಂದು ತಿಳಿದುಬಂದಿದೆ. ಕೆಲ ಖಾಸಗಿ ಬ್ಯಾಂಕ್ ಗಳು ರಾತ್ರಿ 8ರವೆರೆಗೂ ಕಾರ್ಯ ನಿರ್ವಹಿಸಲು ನಿರ್ಧರಿಸಿದ್ದರೆ, ರಾಷ್ಟ್ಕೀಕೃತ ಬ್ಯಾಂಕ್ ಎಸ್ ಬಿಐ ರಾತ್ರಿ 9ರವೆರಗೂ  ಕಾರ್ಯ ನಿರ್ವಹಿಸುವುದಾಗಿ ತಿಳಿಸಿದೆ.

ಇನ್ನು ಆರ್ ಬಿಐ ಎಲ್ಲ ಬ್ಯಾಂಕ್ ನೌಕರರಿಗೆ ಅನಗತ್ಯ ರಜೆಗಳನ್ನು ತೆಗೆದುಕೊಳ್ಳದಂತೆ ಸೂಚನೆ ನೀಡಿದ್ದು, ಬಹುತೇಕ ಸಿಬ್ಬಂದಿಗಳ ರಜೆಗಳನ್ನು ಮೊಟಕುಗೊಳಿಸಲಾಗಿದೆ. ಅಲ್ಲದೆ ತುರ್ತು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ  ನೀಡಲಾಗಿದೆ. ಖಾಸಗಿ ಸುದ್ದಿ ಪತ್ರಿಕೆಯೊಂದು ವರದಿ ಮಾಡಿರುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಕಿಶೋರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಸಮೂಹದ  ಬ್ಯಾಂಕ್ ಗಳ ಕೆಲ ಶಾಖೆಗಳು ರಾತ್ರಿ 9ರವೆರಗೂ ಕಾರ್ಯ ನಿರ್ವಹಿಸಲಿವೆ ಎಂದು ಹೇಳಿದ್ದಾರೆ.

ತರಬೇತಿ ರದ್ದುಗೊಳಿಸಿದ ಪಂಜಾಬ್ ನ್ಯಾಷನಲ್ ಬ್ಯಾಂಕ್!

ಇನ್ನು ಬ್ಯಾಂಕ್ ಗಳತ್ತ ಮುಗಿಬಿದ್ದಿರುವ ಜನರನ್ನು ನಿರ್ವಹಣೆ ಮಾಡಲು ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಂಸ್ಥೆ ತನ್ನ ಬ್ಯಾಂಕ್ ಗಳಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುತ್ತಿದ್ದು, ಇದಕ್ಕಾಗಿ ತನ್ನ ತರಬೇತಿ ನಿರತ  ಸಿಬ್ಬಂದಿಗಳನ್ನೇ ಕರ್ತವ್ಯಕ್ಕೆ ನಿಯೋಜಿಸಿದೆ  ಎಂದು ಹೇಳಲಾಗುತ್ತಿದೆ. ತನ್ನ ಎಲ್ಲ ಬ್ಯಾಂಕುಗಳಲ್ಲಿಯೂ ವಿಶೇಷ ಕೌಂಟರ್ ಗಳನ್ನು ತೆರೆದು ಹೆಚ್ಚಿನ ಪ್ರಮಾಣದಲ್ಲಿ ವ್ಯವಹಾರ ನಡೆಸುವಂತೆ ಸೂಚನೆ ನೀಡಿದೆ. ಪ್ರಮುಖವಾಗಿ  ಮಹಿಳೆಯರಿಗೆ ಮತ್ತು ವೃದ್ಧರಿಗೆ ಪ್ರತ್ಯೇಕ ಕೌಂಟರ್ ಗಳನ್ನು ತೆರೆಯಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಎಸ್ ಬಿಐ ಹಾಗೂ ಪಿಎನ್ ಬಿ ಬ್ಯಾಂಕ್ ಗಳಿಂದ ಉತ್ತೇಜನ ಪಡೆದು ಮತ್ತಷ್ಟು ಬ್ಯಾಂಕ್ ಗಳು ತಮ್ಮ ಕಾರ್ಯಾವಧಿಯನ್ನು ವಿಸ್ತರಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT