ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕೇರಳ ಬ್ಯಾಂಕ್ ನಲ್ಲಿ ೫.೫ ಲಕ್ಷ ಜಮಾ ಮಾಡಲು ಬಂದಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು

ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೋರ್ (ಎಸ್ ಬಿ ಟಿ) ನಲ್ಲಿ ಹಣ ಜಮಾ ಮಾಡಲು ಬಂದಿದ್ದ ಕೇರಳ ವಿದ್ಯುಚ್ಛಕ್ತಿ ಮಂಡಳಿಯ ಸಿಬ್ಬಂದಿಯೊಬ್ಬರು ಆ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಪ್ರಾಣ

ಕಣ್ಣೂರು: ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೋರ್ (ಎಸ್ ಬಿ ಟಿ) ನಲ್ಲಿ ಹಣ ಜಮಾ ಮಾಡಲು ಬಂದಿದ್ದ ಕೇರಳ ವಿದ್ಯುಚ್ಛಕ್ತಿ ಮಂಡಳಿಯ ಸಿಬ್ಬಂದಿಯೊಬ್ಬರು ಆ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. 
ಮೃತಪಟ್ಟವರನ್ನು ೪೮ ವರ್ಷದ ಉನ್ನಿ ಎಂದು ಗುರುತಿಸಲಾಗಿದ್ದು, ಪಿಣರಾಯಿಯ ನಿವಾಸಿ ಎಂದು ಈ ಪ್ರಕರಣವನ್ನು ತನಿಖೆ ಮಾಡುತ್ತಿರುವ ಥಾಲಸ್ಸೇರಿ ಪೊಲೀಸರು ಹೇಳಿದ್ದಾರೆ. 
ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸರಿಗೆ ಇನ್ನು ತಿಳಿದುಬಂದಿಲ್ಲ. 
"ಅವರ ಚೀಲದಿಂದ ೫.೫ ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಗುರುತು ಹೇಳಿಕೊಳ್ಳಲು ಇಚ್ಛಿಸಿದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಎಸ್ ಬಿ ಟಿ ಆ ಕಟ್ಟಡದ ಎರಡನೇ ಮಹಡಿಯಲ್ಲಿ ಕಚೇರಿ ಹೊಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT